Headlines

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.  ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್‌ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು…

Read More

ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ : ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read More

ಹಲಾಲ್ – ಜಟ್ಕಾ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರ ನಡೆಯುತ್ತಿದೆ : ಸಚಿವ ಕೆ ಎಸ್ ಈಶ್ವರಪ್ಪ

ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’…

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read More