ಎಸಿಬಿ ಬಲೆಗೆ ಬಿದ್ದ ಪಿಡಿಒ ವಿರುದ್ದ ದೂರು ಕೊಟ್ಟ ವ್ಯಕ್ತಿಗೆ ಬೆದರಿಕೆ ಹಾಕಿದ ಗ್ರಾಪಂ ಸದಸ್ಯ
ಹೊಸನಗರ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಎಂ ಗುಡ್ಡೆಕೊಪ್ಪದ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆಬಿದ್ದಿದರು. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು 9 ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್ ಕೆಲಸಕ್ಕೆ ಪಿಡಿಒ ಮುರುಗೇಶ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಈ ಸಂಬಂಧ ಎಸಿಬಿ ಮೊರೆ…