Headlines

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…

Read More

ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:

ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…

Read More

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಇಬ್ಬರ ವಿರುದ್ದ ಎಫ಼್ ಐ ಆರ್ ದಾಖಲಿಸಲು ಕೋರಿ ಕೋರ್ಟ್ ಗೆ ಅರ್ಜಿ :

ಶಿವಮೊಗ್ಗ ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಡೆದ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರು, ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ, ಅವರನ್ನು ದಮನ ಮಾಡುತ್ತೇವೆ ಎಂಬ ಪ್ರಚೋದನಕಾರಿ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬೆಂಗಳೂರು ನಗರದ 40ನೆ ಎಸಿಎಂಎಂ ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ.ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹರ್ಷ ಹತ್ಯೆಯ ನಂತರ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ…

Read More

ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಆನಂದಪುರ ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ದಂಪತಿಗಳಿಗೆ ಗಾಯ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಅನಾಹುತ ಸಂಭವಿಸಿದೆ. ಅಮಟೆಕೊಪ್ಪ ದಿಂದ ಹಾಲುಗುಡ್ಡೆಗೆ ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇರುವಕ್ಕಿ ಬಳಿ   ಬೈಕ್ ನಲ್ಲಿ ಕೂತಿದ್ದ ಗಂಡ ಹೆಂಡತಿಯ ಮೇಲೆ ಚಲಿಸುತ್ತಿರುವಾಗಲೇ ಬೃಹತ್ ಆಕಾರದ ಮರ ಬಿದ್ದು ಬೈಕ್ ಸವಾರರಿಗೆ ತೀವ್ರ ಗಾಯವಾಗಿದೆ ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು  ಸ್ಥಳೀಯರ ಸಹಕಾರದಿಂದ ಇಬ್ಬರ ಜೀವ ಉಳಿದಂತಾಗಿದೆ. ಬೈಕ್ ಇದೀಗ ಮರದಡಿ ಅಪ್ಪಚ್ಚಿಯಾಗಿದ್ದು ತೆರವುಗೊಳಿಸುವ ಕಾರ್ಯ…

Read More