ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು
ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…


