Headlines

ಕೂರಂಬಳ್ಳಿ ಗ್ರಾಮದ ಅಬಕಾರಿ ನಿರೀಕ್ಷಕ ಗಿರೀಶ್ ರವರಿಗೆ ಮಾತೃವಿಯೋಗ :

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದ ಸೀತಮ್ಮ(64) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಚೂಡಪ್ಪ ಮಕ್ಕಳಾದ ಕೆ ಸಿ ಗಿರೀಶ್ , ಅಬಕಾರಿ ನಿರೀಕ್ಷಕರು ಉಡುಪಿ. ಮತ್ತೋರ್ವ ಮಗ ಪ್ರಕಾಶ್ ಪುತ್ರಿ ಚೇತನಾ ಹಾಗೂ ಸಹೋದರ ಸಹೋದರಿಯರನ್ನು ಬಿಟ್ಟು ಅಗಲಿದ್ದಾರೆ  ಮೃತರ ಅಂತ್ಯಕ್ರಿಯೆಯು ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಕೂರಂಬಳ್ಳಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್​ ಪ್ರದಾನ :

ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್​ ಸ್ಟಾರ್ ಪುನೀತ್ ರಾಜ್‍ಕುಮಾರ್​ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ…

Read More

ಆಸ್ತಿಗಾಗಿ ಹೆತ್ತ ತಾಯಿಯನ್ನೆ ಥಳಿಸಿ,ತಲೆ ಬೋಳಿಸಿ ಬೀದಿಗೆ ಎಸೆದ ಪಾಪಿ ಮಕ್ಕಳು :

ಹೆತ್ತ ತಾಯಿಯ ಆಸ್ತಿಯನ್ನು ಕಬಳಿಸಿ ಮನಸೋ ಇಚ್ಚೇ ಥಳಿಸಿ ಅಷ್ಟಕ್ಕೂ ತೃಪ್ತಿಯಾಗದ ಪಾಪಿ ಮಕ್ಕಳು ಸಾಕಿ ಸಲುಹಿದ ತಾಯಿಯ ತಲೆ ಬೋಳಿಸಿ ಎಸೆದಿರುವ ಘಟನೆ ನಡೆದಿದೆ. ಹೌದು ಇಂತಹ ದಾರುಣ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿ ಎಂಬಲ್ಲಿ ನಡೆದಿದೆ. 95 ವರ್ಷದ ವೃದ್ಧೆ ಸಾವಿತ್ರಮ್ಮನವರ ಕಥೆ ಇದಾಗಿದ್ದು ಈಕೆಗೆ 4ಜನ ಮಕ್ಕಳಿರುತ್ತಾರೆ. ಹಿರಿಯ ಮಗ ಶಿವರುದ್ರಯ್ಯ ಎರಡನೇ ಮಗ ಚಂದ್ರಶೇಖರಯ್ಯ. ಮೂರನೆಯವರು ಈರಮ್ಮ ಹಾಗೂ ನಾಲ್ಕನೆಯ ಪುತ್ರ ಎ.ವಿ. ಪ್ರಕಾಶ್ ಅಲಿಯಾಸ್ ಬೂದಯ್ಯ ಅಲಿಯಾಸ್…

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::

ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ  ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು

ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ  ನಗರದ ಓ.ಟಿ.ರಸ್ತೆಯ‌ಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ…

Read More

ರಿಪ್ಪನ್ ಪೇಟೆ ಸಮೀಪ ಬೆನವಳ್ಳಿಯಲ್ಲಿ ಬೈಕ್ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ತಿರುವಿನಲ್ಲಿ ಬೈಕ್ ಅಪಘಾತವಾಗಿ  ಆಯನೂರು ಮೂಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ  ನಡೆದಿದೆ. ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್(25) ಎಂಬ ಯುವಕ ಮೃತಪಟ್ಟ ದುರ್ದೈವಿ. ರಿಪ್ಪನ್ ಪೇಟೆ ಕಡೆಯಿಂದ ಆಯನೂರು ಕಡೆಗೆ ಟಿವಿಎಸ್ ಅಪಾಚೆ ಬೈಕ್ (KA 14 EP 9884) ನಲ್ಲಿ ತೆರಳುತ್ತಿರುವಾಗ ಬೆನವಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ ಈ ಸಂಧರ್ಭದಲ್ಲಿ ಹಿಂಬದಿ ಕುಳಿತಿದ್ದ ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್ ಕೆಳಗೆ…

Read More

ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು ನಬೀಲ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜಿಕೃಲ್ಲಾ ಖಾನ್’ನನ್ನು ಮೆಗ್ಗಾನ್…

Read More