Headlines

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

ಸಾಗರದ ಹೆಲಿಪ್ಯಾಡ್ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಸಾಗರದ ಹೆಲಿಪ್ಯಾಡ್ ನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬೈಕ್ ನ್ನು ಹೆಲಿಪ್ಯಾಡ್ ನಲ್ಲಿ ಕೆಳಗೆ ಬೀಳಿಸಿ ಅಲ್ಲೆ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಾಳಗುಪ್ಪ ಸಮೀಪದ ಶಿರೂರು ಹಳ್ಳಿಯ ನಿವಾಸಿ ಅಣ್ಣಪ್ಪ  ( 33 ) ವರ್ಷ ಎಂದು ಗುರುತು ಪತ್ತೆಯಾಗಿದ್ದು ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…

Read More

ಹಿಜಾಬ್ ಕುರಿತು ಬಹುನಿರೀಕ್ಷಿತ ತೀರ್ಪು ಪ್ರಕಟ : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಭಾರಿ ನಿರಾಸೆ !!!!!!!

ಹಿಜಾಬ್​ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್​ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ. ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್​​ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.  ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು  ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್…

Read More

ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…

Read More

ಮಹತ್ವದ ಹಿಜಾಬ್ ತೀರ್ಪು ನಾಳೆ ಪ್ರಕಟಣೆ : ಬೆಂಗಳೂರಿನಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ ಜಾರಿ

ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ ನ್ಯಾ. ಖಾಜಿ…

Read More

ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…

Read More

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ಸಾಗರ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ : ಲಾರಿ ಕದ್ದು ಪರಾರಿಯಾದವರು 10 ದಿನಗಳಲ್ಲೇ ಅರೆಸ್ಟ್…!

ಸಾಗರ: ಅಂದಾಜು 7.50 ಲಕ್ಷ ಮೌಲ್ಯದ ಲಾರಿಯನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಪ್ರಕರಣ ದಾಖಲಾದ ಹತ್ತೇ ದಿನಗಳಲ್ಲಿ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ನಿವಾಸಿ ಬಿ.ಕೆ.ಕರಿಬಸಪ್ಪ ಅಲಿಯಾಸ್ ಕರಿಯ(32) ಎಂಬಾತನೇ  ಬಂಧಿತ ಆರೋಪಿ. ಈತನ ಬಳಿಯಿಂದ ಕದ್ದಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ವಿವರ: ಆನಂದಪುರ ದಾಸಕೊಪ್ಪ ಗ್ರಾಮದ ವಾಸಿಯೊಬ್ಬರ ಲಾರಿಯನ್ನು ಮಾರ್ಚ್ 3ರಂದು ರಾತ್ರಿ ಹೊತ್ತಲ್ಲಿ ಕಳ್ಳತನ ಮಾಡಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಸಾಗರ ಗ್ರಾಮಾಂತರ ಠಾಣೆಯ ವೇರಿ ಸ್ಮಾರ್ಟ್…

Read More

ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ; ಉತ್ತಮ ಸ್ಪಂದನೆ

ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ. ರೇಡಿಯೋ ಟೆಸ್ಟಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾಧ್ಯತೆ ಇದೆ. ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗ ಬೆಳಗ್ಗೆ 9…

Read More
Exit mobile version