Headlines

ಕಳಪೆ ಕಾಮಗಾರಿ, ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೂರು ಸರ್ಕಾರಿ ಕಿರಿಯ ಶಾಲೆಯ ನೆಲ ಹಾಸಿಗೆ ಟೈಲ್ಸ್ ಅಳವಡಿಕೆ ಕಾಮಗಾರಿ ಕಳಪೆ ಗುಣಮಟ್ಟ ಹೊಂದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆದರ್ಶಗೌಡ ಕಲ್ಲೂರು ಮಾತನಾಡಿ ಶಾಲೆ ನೆಲಹಾಸು ಕಾಮಗಾರಿಗೆ ಒಂದುವರೆ ಲಕ್ಷ ರೂಪಾಯಿ ಅನುದಾನ ಮಂಜೂರಾಗಿರುವ ಬಗ್ಗೆ ಗುತ್ತಿಗೆದಾರ ತಿಳಿಸಿರುತ್ತಾನೆ. ಆದರೆ ಕಾಮಗಾರಿ ಮಂಜೂರಾತಿ ವಿಷಯ ಶಾಲಾಭಿವೃದ್ಧಿ ಸಮಿತಿಗಾಗಲೀ, ಸ್ಥಳೀಯರೇ ಆದ ಗ್ರಾಮ ಪಂಚಾಯತಿ ಅಧ್ಯಕ್ಷರಿಗಾಗಲೀ ಹಾಗೂ ಗ್ರಾಮಸ್ಥರಿಗಾಗಲೀ ಮಾಹಿತಿ ಇರುವುದಿಲ್ಲ. ಏಕಾಏಕಿ ಬುಧವಾರ…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ನಿನ್ನೆ ರಾತ್ರಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಅರಸಾಳು ಗ್ರಾಮದ ನಿವಾಸಿ ಹಾಗೂ ರಿಪ್ಪನ್ ಪೇಟೆ MSIL ಸಂಸ್ಥೆಯ ಉದ್ಯೋಗಿಯಾಗಿದ್ದ ನವೀನ್ (36) ಮೃತಪಟ್ಟಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಟೊಯೋಟಾ ಕಾರು ಹಾಗೂ ರಿಪ್ಪನ್ ಪೇಟೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತಿದ್ದಾಗ ಬೆನವಳ್ಳಿ ಸಮೀಪದಲ್ಲಿ ಈ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್…

Read More

ಸಾವು ಸಾಧನೆಯಲ್ಲ, ಬದುಕಿ ಸಾಧಿಸಬೇಕು:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ರಮ್ಯಾ

ರಿಪ್ಪನ್‌ಪೇಟೆ: ಮಹಿಳೆಯರಿಗೂ ಸಮಾಜದಲ್ಲಿ ಗೌರವಾಧಾರಗಳಿದ್ದು, ಅಂಜಿಕೊಳ್ಳುವುದನ್ನು ಬಿಟ್ಟು ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸಮಸ್ಯೆಗಳಿಗೆ ಸಾವು ಪರಿಹಾರವೂ ಅಲ್ಲ ಸಾಧನೆಯೂ ಅಲ್ಲ. ಸಂಕಷ್ಟಗಳನ್ನು ಎದುರಿಸಿ ಬದುಕಬೇಕು ಎಂದು ಮಹಿಳಾ ಪೊಲೀಸ್  ಕಾನ್‌ಸ್ಟೇಬಲ್ ರಮ್ಯಾ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕಸ್ತೂರಿ ಮಹಿಳಾ ಬಳಗ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಒಳ್ಳೆಯ ಶಿಕ್ಷಣ ಮಹಿಳೆಯ ಜೀವನವನ್ನು ಕಾಪಾಡುತ್ತದೆ. ಬಂಗಾರ, ಹಣ, ಬಾಂಡ್ ಮಾಡಿಸುವುದಕ್ಕಿಂತ ಉತ್ತಮ ಶಿಕ್ಷಣ ನೀಡಿದರೆ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಮಹಿಳೆಯರು ಗುರಿಯಡೆಗೆ ಸಾಗುವಾಗ ಇತರರು…

Read More

ಮಾರ್ಚ್ 12 ಮತ್ತು 13ಕ್ಕೆ ಸಾಗರದಲ್ಲಿ ಅದ್ದೂರಿ ಗಣಪತಿ ಕೆರೆಹಬ್ಬ

ಮಾ. 12 ಮತ್ತು 13 ರಂದು ಗಣಪತಿ ಕೆರೆಹಬ್ಬ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾ.12ರಂದು ಬೆಳಿಗ್ಗೆ 6ಕ್ಕೆ ಗಣಪತಿ ಕೆರೆ ಸ್ವಚ್ಚತೆ ಕಾರ್ಯಕ್ರಮಕ್ಕೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಸಂಘಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಅದೇ ದಿನ ಸಂಜೆ 6-30ಕ್ಕೆ ಗಂಗಾರತಿ ಮಾದರಿಯಲ್ಲಿ…

Read More

ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು ಗ್ರಾಮ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿ ನೀಡಲಿರುವ ಕಾರ್ಯಕ್ರಮದ ಅಂಗವಾಗಿ ಇಂದು ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನವದೆಹಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಆಯುಕ್ತರಾದ ಶಿಲ್ಪಾ ಶರ್ಮಾ ಇಂದು ಹೊಳಲೂರು ಗ್ರಾಮದ ಸ್ಪಚ್ಚ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಹೊಸನಗರ ಜೆಸಿಐ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಹೇರ್ ಡೊನೇಷನ್” ಕಾರ್ಯಕ್ರಮ

ಹೊಸನಗರ:- ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜೆಸಿಐ ಹೊಸನಗರ ಕೊಡಚಾದ್ರಿಯ ಅಧ್ಯಕ್ಷರು ಸೀಮಾಕಿರಣ್ ಸೆರಾವ್ ರವರ ನೇತೃತ್ವದಲ್ಲಿ ಹೇರ್ ಡೊನೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜೆಸಿಐ ಹೊಸನಗರ ಕೊಡಚಾದ್ರಿ, ಜೆಸಿ ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತು ಕುಟುಂಬದವರು ಮತ್ತು ಬೆಂಗಳೂರಿನಿಂದ ಹೇರ್ ಡೋನೆಷನ್ ಟ್ರಸ್ಟ್ ನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಡಾ!ಚಡಗ ಕಾಂಪ್ಲೆಕ್ಸ್ ಸಿಯಂಟೋ ಬ್ಯೂಟಿ ಸಲೂನ್ ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಅಧ್ಯಕ್ಷರಾದ ಸೀಮಾ ಕಿರಣ್ ಮತ್ತು ಅವರ ಮಗಳಾದ ಅರ್ಚನಾ…

Read More

ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್

ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…

Read More