Headlines

ಸಮಯಕ್ಕೆ ಸರಿಯಾಗಿ ಸಿಗದ ಆಂಬುಲೆನ್ಸ್ : 45 ದಿನದ ಮಗು ಸಾವು

  ತುಮರಿ ಗ್ರಾಮ ಎಂಬ ಮಾನವ ನಿರ್ಮಿತ ದ್ವೀಪದಲ್ಲಿ 108 ಅವ್ಯವಸ್ಥೆ, ಹೊಸ ಆಂಬುಲೆನ್ಸ್ ಬಂದರೂ ಸಕಾಲಕ್ಕೆ ತುರ್ತು ಆರೋಗ್ಯ ವಾಹನ ಸಿಗದೆ 45 ದಿನಗಳ ಮಗು ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬ್ಯಾಕೋಡು ಸಮೀಪದ ಸಸಿಗೊಳ್ಳಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನದಿಂದ ದ್ವೀಪದ ಹೊಸ ಆಂಬುಲೆನ್ಸ್ ಸೇವೆಯಲ್ಲಿ ಇಲ್ಲದ ಹಿನ್ನೆಲೆಯಲ್ಲಿ ಸಸಿಗೊಳ್ಳಿ ಸಮೀಪದ ಎಲ್ದಮಕ್ಕಿ ಹಳ್ಳಿಯ ಗೀತಾ ಮತ್ತು ಉಮೇಶ್ ದಂಪತಿಗಳ 45 ದಿನಗಳ ಹಸುಗೂಸಿಗೆ ಉಸಿರಾಟ ತೊಂದರೆಯಾಗಿ 108 ಅಲಭ್ಯತೆಯಿಂದ ತಡವಾಗಿ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು. ಅಧಿಕಾರದ…

Read More

ಹಿಜಾಬ್ ವಿವಾದ : ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಅರ್ಜಿ ವರ್ಗಾವಣೆ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್​ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು.  ಇದಕ್ಕಾಗಿ ಮುಖ್ಯ…

Read More

ಹರತಾಳು ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷೆ ಸೇರಿದಂತೆ 7 ಜನ ಸದಸ್ಯರು ಕೆಡಿಪಿ ಸಭೆಗೆ ಗೈರು :

ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಉಪಾಧ್ಯಕ್ಷರು ಮತ್ತು 6 ಜನ ಸದಸ್ಯರು ಗೈರಾಗಿದ್ದರು. 8 ಸದಸ್ಯ ಬಲದ ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಹಮ್ಮಿಕೊಳ್ಳಲಾಗಿತ್ತು  ಅಧ್ಯಕ್ಷರಾದ ಕಲ್ಲಿ ಯೋಗೇಂದ್ರಪ್ಪ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ವಸತಿ ಮನೆ ಹಂಚಿಕೆಯಲ್ಲಿ ತಾರತಮ್ಯ ಮಾಡುವ ಮೂಲಕ ಸದಸ್ಯ ಸ್ಥಾನಕ್ಕೆ ಹಕ್ಕು ಚ್ಯುತಿ ತರುವ ಪ್ರಯತ್ನ ಮಾಡಿದ್ದಾರೆ .ನರೇಗಾ ಯೋಜನೆ ಮತ್ತು…

Read More

ಶಿವಮೊಗ್ಗದ ಬಾಪೂಜಿ ಕಾಲೇಜಿನಲ್ಲಿ ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಿಸಿದ NSUI

ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್​​ಎಸ್‍ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು.  ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್​​ಎಸ್‍ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು. ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ…

Read More

ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ

ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ‌ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್‌ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ಶಾಸಕ ಹಾಲಪ್ಪರವರ ಎದುರೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ವೀಡಿಯೋ ವೈರಲ್ : ತಾರಕಕ್ಕೇರಿದ ಸಾಗರದ ಜ್ಯೂನಿಯರ್ ಕಾಲೇಜಿನ ಹಿಜಾಬ್ – ಕೇಸರಿ ಘರ್ಷಣೆ !!!!!!

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳು ಹಿಜಾಬ್ ಹಾಗೂ  ಕೇಸರಿ ಶಾಲಿನ ವಿಚಾರವಾಗಿ ಇಂದು ಬೆಳಿಗ್ಗೆ ಕಾಲೇಜಿನ ಆವರಣದ ಬಳಿ ಮಾತಿನ ಚಕಮಕಿ ನಡೆಯುತ್ತಿತ್ತು.ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ  ಆಗಮಿಸಿದ್ದರು ಇದರ ನಡುವೆ ಸಣ್ಣಪುಟ್ಟ ಗಲಾಟೆ ನಡೆದಿದ್ದು  ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಇದನ್ನು ಮನಗಂಡ ಶಾಸಕ ಹರತಾಳು ಹಾಲಪ್ಪನವರು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ್ದರು. ವಿದ್ಯಾರ್ಥಿಗಳ ಸಮೂಹ ಶಾಸಕ ಹರತಾಳು ಹಾಲಪ್ಪ ನವರ ಆಸ್ಪತ್ರೆಯ ಭೇಟಿಯಲ್ಲೂ ಹಾಜರಿದ್ದರು.ಇದರ ನಡುವೆ ವಿದ್ಯಾರ್ಥಿಗಳು…

Read More