ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ ಇಡೀ ಶಂಕರಘಟ್ಟ ಗ್ರಾಮ ಸೀಲ್ ಡೌನ್ :
ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೋಮವಾರ ಇಡೀ ಗ್ರಾಮವನ್ನು ‘ಕಂಟೈನ್ಮೆಂಟ್ ಜೋನ್’ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಂಕರಘಟ್ಟ ಗ್ರಾಮಕ್ಕೆ ಒಳಪಡಿಸುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಒಟ್ಟು ೨೪ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ.ಪಿ ವೀರಭದ್ರಪ್ಪ ೫ ದಿನಗಳ ಕಾಲ ರಜೆ ಘೋಷಿಸಿದ್ದರು. ಈ ನಡುವೆ ಇದೀಗ ತಹಸೀಲ್ದಾರ್ರವರು ಸರ್ಕಾರದ ಮಾರ್ಗಸೂಚಿಯಂತೆ…