Headlines

ಅಪ್ರಾಪ್ತೆಯ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ‌ ಘಟನೆ‌ ವರದಿಯಾಗಿದೆ. ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ  ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು  ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು. ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು….

Read More

ಅನಾಮಧೇಯ ಶವ: ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ : ಜ.08 ರಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅನಾಮಧೇಯ ವೃದ್ದರೋರ್ವರು ಮರಣ ಹೊಂದಿದ್ದಾರೆ.      ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಲಾಗಿದ್ದ ಸುಮಾರು 60 ರಿಂದ 65 ವರ್ಷದ ಅನಾಮಧೇಯ ವೃದ್ದರು ಮೃತಪಟ್ಟಿದ್ದು ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಸುಮಾರು 5.6 ಅಡಿ ಎತ್ತರ ಇದ್ದು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಇರುತ್ತದೆ. ಮುಂಭಾಗದ…

Read More

ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :

ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.  ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕೂಡಾ ಶತಕ ದಾಟಿದ ಕೋವಿಡ್ ಪಾಸಿಟಿವ್ : 12 ಜನ ಗುಣಮುಖ

ಶಿವಮೊಗ್ಗ : ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟ: ಇಂದು ಒಂದೇ ದಿನ ಶತಕ ದಾಟಿದ ಸೋಂಕಿತರ ಸಂಖ್ಯೆ !

ಶಿವಮೊಗ್ಗ: ಜಿಲ್ಲೆಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು ಇಂದು ಒಂದೇ ದಿನ 116 ಮಂದಿ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯ ಜನರಲ್ಲಿಮತ್ತಷ್ಟು ಆತಂಕ ಹೆಚ್ಚಾಗಿದೆ. ಕೊರೋನದ ನಾಗಲೋಟ ನಾಲ್ಕನೇ ದಿನವೂ ಮುಂದುವರೆದಿದೆ.  ವೀಕೆಂಡ್ ಕರ್ಫ್ಯೂಗೆ ಕೊರೋನ‌ ಶತಕ ಭಾರಿಸಿದೆ.  ಜ.6 ರಂದು 19 ಜನರಲ್ಲಿದ್ದ ಕೊರೋನ, ಜ.6 ರಂದು 23 ಜನರಲ್ಲಿ ಕಾಣಿಸಿಕೊಂಡಿತು. ಜ.7 ರಂದು 59 ಜನರಲ್ಲಿದ್ದ ಕೊರೋನ‌ ಇಂದು116 ಜನರಲ್ಲಿ ಪತ್ತೆಯಾಗಿದೆ.  ಆದರೆ ಸೋಂಕಿಗೆ ಯಾರು ಬಲಿಯಾಗಿಲ್ಲವಾದ್ದರಿಂದ, ಸಾವಿನ ಸಂಖ್ಯೆ  1072 ರಲ್ಲೇ ಇದೆ. ತಾಲೂಕುವಾರು ಸೋಂಕಿತರ ವಿವರ: ಶಿವಮೊಗ್ಗ…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More