Headlines

ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚನೆ : ಪ್ರಕರಣ ದಾಖಲು|Cheating

ಹಾಸ್ಟೆಲ್ ನ ವಾರ್ಡನ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತನ್ನ ಪ್ರಭಾವದಿಂದ ಕೆಲಸ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗದ ನಿವಾಸಿಯಾದ ಸುನಿಲ್,ಸಾಗರದ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಹಿಳೆಯರಿಗೆ ಪರಿಚಿತನಾಗಿದ್ದಾನೆ. ಸುನಿಲ್ ಅವರಿಗೆ ಸುಳ್ಳು ಹೇಳಿ, “ನಾನು ಆನಂದಪುರದ ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಸಂಸ್ಥೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿದ್ದೇನೆ. ಅವರು ಅದೇ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್, ಹೌಸ್ ಕೀಪಿಂಗ್ ಸಿಬ್ಬಂದಿ ಮತ್ತು ಅಡುಗೆಯವರಾಗಿ…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict

 ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.  ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ಖಾಸಗಿ ಬಸ್ ಚಾಲಕ – ನಿರ್ವಾಹಕರಿಗೆ ಸಮವಸ್ತ್ರ ಕಡ್ಡಾಯ – ಎಸ್ ಪಿ|Uniform

ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್‌ಟಿಒ ಗಂಗಾಧರ್‌ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್‌ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ…

Read More

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More
Exit mobile version