Headlines

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More