Headlines

ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ಹೊಸನಗರದ ಸಂತ ಅಂತೋನಿ ದೇವಾಲಯದ ವಾರ್ಷಿಕೋತ್ಸವ – ಭಾವೈಕ್ಯತೆಗೆ ಹೊಸ ಇತಿಹಾಸ ಬರೆದ ಹೊಸನಗರ ಜನತೆ|Hosanagara

ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಕ್ರೈಸ್ತ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ದೇವರ ನಾಮ ಭಜಿಸುತ್ತಾ ಧಾರ್ಮಿಕ  ಮೆರವಣಿಗೆ ನಡೆಸಿದರು. ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹೊಸನಗರ ಪಟ್ಟಣದ ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆವೆರೆಂಡ್ ಫಾದರ್ ಸೈಮನ್ ರವರೊಂದಿಗೆ ಜಿಲ್ಲೆಯ 30ಕ್ಕೂ ಹೆಚ್ಚು ಚರ್ಚ್ ಗಳ ಧರ್ಮ ಗುರುಗಳು ಪಾಲ್ಗೊಂಡಿದ್ದರು. ಇತ್ತೀಚೆಗೆ ಪಟ್ಟಣದ ಹಿಂದುಗಳು ಶ್ರೀ ಗಣೇಶೋತ್ಸವ,ನವರಾತ್ರಿ ಸಡಗರ ಉತ್ಸಾಹ ಸಂಭ್ರಮದಿಂದ ಆಚರಿಸಿದ್ದು ಅದರ ಬೆನ್ನಲ್ಲೇ ಮುಸ್ಲಿಂ ಬಾಂಧವರು ಈದ್…

Read More

ಅ.13 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ – Job news

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga

ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…

Read More

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.  ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…

Read More