ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident
ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ. ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…