Headlines

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ

ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಹೆಬ್ಬಂಡೆಯ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರ :

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಹೆಬ್ಬಂಡೆಯ ಅಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಜನಸಾಗರವೇ ಶ್ರದ್ದಾಭಕ್ತಿಯಿಂದಾ ಹರಿದು ಬಂದಿತು. ಅಮ್ಮನಘಟ್ಟ ಜಾತ್ರೆ ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದ್ದು ಮಲೆನಾಡಿನ ಸಹ್ಯಾದ್ರಿಯ ಪರ್ವತ ತಪ್ಪಲಿನಲ್ಲಿ  ವಿಶಿಷ್ಟ ಪ್ರಾಕೃತ್ತಿಕ ಸೌಂದರ್ಯದಲ್ಲಿ ಕಂಗೊಳಿಸುವ ಧಾರ್ಮಿಕ ಶ್ರದ್ದಾಕೇಂದ್ರವಾದ ಜೇನುಕಲ್ಲಮ್ಮ ಹಲವು ಜನಾಂಗಗಳ ಕುಲದೇವತೆಯಾಗಿ ನೆಲೆ ನಿಂತಿರುವ ದೇವಿಗೆ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಪುರೋಹಿತ ಬಳಗ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಿತೃ ಪಕ್ಷದಲ್ಲಿ ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಎರಡು ಮಂಗಳವಾರ ಶುಕ್ರವಾರದೊಂದು…

Read More

ಹೊಸ ತಿರುವು ಪಡೆದುಕೊಂಡ ಮಹಿಳೆ ನಾಪತ್ತೆ ಪ್ರಕರಣ : ಪತ್ನಿಯನ್ನು ಕೊಲೆ ಮಾಡಿ ನದಿಗೆ ಎಸೆದಿದ್ದ ಪತಿರಾಯ

ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಪತಿಯೆ ಈ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕೊಪ್ಪ ಗ್ರಾಮದಲ್ಲಿ ದಿನಾಂಕ 04-08-2022ರಂದು ಮಹಿಳೆ ಕಾಣೆಯಾಗಿದ್ದಾಳೆಂದು ಮಹಿಳೆಯ ಅಣ್ಣ ಅಣ್ಣಪ್ಪ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾಣೆಯಾದ ಪುಷ್ಪಾವತಿ ಯನ್ನು ಆಕೆಯ ಗಂಡ ದಯಾನಂದ ಕೊಲೆ ಮಾಡಿ ವರದಾ ನದಿಯಲ್ಲಿ ಎಸೆದಿರುವುದು ಪೊಲೀಸ್ ತನಿಖೆಯಲ್ಲಿ ದೃಢಪಟ್ಟಿದೆ. ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.   ರಾಜಶೇಖರ್ ವೃತ್ತ ನಿರೀಕ್ಷಕರು ಸೊರಬ ಹಾಗೂ ದೇವರಾಯ ಉಪನಿರೀಕ್ಷಕರು ಸೊರಬ ಠಾಣೆ…

Read More

ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ರಿಪ್ಪನ್‌ಪೇಟೆ : ಮದುವೆಗೆ ನಿರಾಕರಿಸಿದ ಪ್ರಿಯಕರ – ವಿಷ ಸೇವಿಸಿ ಯುವತಿ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ ನಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಕ್ಯಾಂಪ್ ನಲ್ಲಿ ಅನುಷಾ (19) ಎಂಬ ಯುವತಿ ನಿನ್ನೆ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ.ಕೂಡಲೇ ಪ್ರಿಯಕರ ಮಂಜುನಾಥ್ ಓಡಿ ಬಂದು ಯುವತಿಯನ್ನ ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂದಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ನಂತರ ಹೆಚ್ಚಿನ ಚಿಕಿತ್ಸೆಗೆ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಗೆ…

Read More