Headlines

ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :

ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದ  ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು  ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ,      ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಅಡ್ಡೇರಿ ಮಚಲಿ ಜಡ್ಡು  ಸಂಪರ್ಕ ರಸ್ತೆಯ  ದುಸ್ಥಿತಿ ಕಣ್ಣಾರೆ ಕಂಡರು. ಮಳೆ…

Read More

ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ

 ‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’  ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…

Read More

ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ

ಭದ್ರಾವತಿ :  ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ  ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ  ವೇಳೆಗೆ ರಂಗಪ್ಪ ವೃತ್ತ ತಲುಪಿತು.    ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು  ವಿತರಣೆ ಜೊತೆಗೆ…

Read More

395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

ಬಿಜೆಪಿ ಪಕ್ಷದ ದೃಷ್ಟಿಯಲ್ಲಿ ದಲಿತರು ಹಿಂದೂಗಳಲ್ಲವೇ : ಕಿಮ್ಮನೆ ರತ್ನಾಕರ್ ಪ್ರಶ್ನೆ

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರ ಜೊತೆ ಒಟ್ಟಾಗಿ ಹೋಗುತ್ತೇವೆ ಎಂದು ಹೇಳುವ ಕಾರಣಕ್ಕೆ ಜನ ನಂಬದೆ ಇರಬಹುದು ಆದರೆ ಬಿಜೆಪಿ ಪಕ್ಷ ನಮಗೆ ಆ ಸಮುದಾಯದ ಮತವೇ ಬೇಡ ಎಂದು ಹೇಳುತ್ತಾರೆ ಇದರಿಂದಾಗಿ ಕೋಮು ಗಲಭೆ ಹೆಚ್ಚುವುದಿಲ್ಲವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಹೋರಾಟ ಮಾಡುತ್ತಾರೆ ಈದ್ಗಾ ಮೈದಾನದಲ್ಲಿ ಗಣಪತಿ ವಿಚಾರಕ್ಕೆ ಹೋರಾಟ ಮಾಡ್ತಾರೆ ಅದರ ಅವಶ್ಯಕತೆ…

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.  ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More
Exit mobile version