ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

ತುಂಗಾ ನದಿಗೆ ಬಾಗಿನ ಅರ್ಪಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಯ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಗುರುವಾರ ಸಂಜೆ ರಾಜ್ಯ ಸರ್ಕಾರದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ  ಬಾಗಿನ ಅರ್ಪಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮಳೆ ಎಷ್ಟು ಬೇಕಾದರೂ ಬರಲಿ, ನದಿ ಉಕ್ಕಿ ಹರಿಯಲಿ ಅದು ಸಮೃದ್ಧಿಯ ಸಂಕೇತ ಆದರೆ ಎಲ್ಲೂ ಕೂಡ ಹನಿಯಾಗದ ರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನ ಅರ್ಪಿಸಿದ್ದೇವೆ…

Read More

ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

 ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…

Read More

ತುಂಗಾ ನದಿಯಲ್ಲಿ ಯುವಕನೊಬ್ಬ ನೀರುಪಾಲು : ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ

ತುಂಗಾ ನದಿಯಲ್ಲಿ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಳೆ ಬಸ್ ಸ್ಟ್ಯಾಂಡ್  ಬಳಿ 25 ರಿಂದ 30 ವರ್ಷ ಅಸುಪಾಸಿನ ಯುವಕ ನೀರಿಗೆ ಹಾರಿರುವುದಾಗಿ ಕೆಲವರು ಹೇಳಿದರೆ ಇನ್ನು ಕೆಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಹೇಳುತಿದ್ದು,ಸ್ಪಷ್ಟ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಆತನ ಶೋಧಕಾರ್ಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಶೋಧಕಾರ್ಯ ಆರಂಭಿಸಿದ್ದಾರೆ.  ಸಂತೋಷ್ ಎಂಬ 27 ವರ್ಷದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದವನು ಎಂದು ಹೇಳಲಾಗುತ್ತಿದೆ. ಪುರಲೆ ನಿವಾಸಿಯವನು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಕುಖ್ಯಾತ ರೌಡಿ ಹಂದಿ ಅಣ್ಣಿ ಹತ್ಯೆಯ ಸಿಸಿಟಿವಿ ದೃಶ್ಯಾವಳಿ :ಕೇವಲ 10 ಸೆಕೆಂಡ್ ನಲ್ಲಿ ಹತ್ಯೆಗೈದು ವಾಪಾಸಾದ ಹಂತಕರು

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಯ ಬರ್ಬರ ಹತ್ಯೆಯಾಗಿದೆ. ವಿನೋಬನಗರದ ಚೌಕಿ ಬಳಿ ಹಂದಿ ಅಣ್ಣಿ ಕೊಲೆಯಾಗಿದೆ.ಬೆಳಿಗ್ಗೆ10.15 ರ ಸುಮಾರಿಗೆ ಹಂತಕರು ಹಂದಿ ಅಣ್ಣಿಯನ್ನು ಬೆನ್ನಟ್ಟಿ ಹತ್ಯೆ ಮಾಡಿದ ವೀಡಿಯೋ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಲಭ್ಯವಾಗಿದೆ. ಇನ್ನೋವ ಕಾರಿನಲ್ಲಿ ಬಂದ ನಾಲ್ಕೈದು ಜನರ ಗುಂಪು ಬೈಕ್ ನಲ್ಲಿ ತೆರಳುತಿದ್ದ ಹಂದಿ ಅಣ್ಣಿ ಎಂಬ ರೌಡಿಯನ್ನು ಅಟ್ಟಾಡಿಸಿ ಮಾರಕಾಸ್ತಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಲೆಯ ಮೇಲೆ ಭೀಕರವಾಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕೇವಲ 10 ಸೆಕೆಂಡ್…

Read More

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ  ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.  (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ  ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More