Headlines

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More

ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.  ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner

ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು‌ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.  ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…

Read More

ಅಕಾಲಿಕ ಮಳೆಯಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು : ಚಂದನ್ ಗೌಡ|jaya Karnataka

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್‌ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು  ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ  ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More