Headlines

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ

ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…

Read More

5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ‌ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…

Read More

ಹೊಸನಗರ ಸಮೀಪದಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More