ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು
ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…


