ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.

ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ, ಅಮಿತ್ ಶಾ, ನಡ್ಡಾ ಅವರು ಹೆಚ್ಚು ಸಮಯ ರಾಜ್ಯಕ್ಕೆ ಕೊಡುತ್ತಾರೆ. ಅದರ ಬಳಕೆ ಮಾಡಿಕೊಂಡು, 140 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಕಾರ್ಯಪ್ರವೃತ್ತರಾಗುತ್ತೇವೆ. ಶಾಸಕರು, ಕಾರ್ಯಕರ್ತರು ಹೆಚ್ಚು ಕೆಲಸ ಮಾಡಬೇಕು.ಎಲ್ಲರಲ್ಲೂ ವಿಶ್ವಾಸ ಮೂಡಿಸಬೇಕು ಎಂದರು.


ಈಗಾಗಲೇ ನಾವು ಕೇಂದ್ರದ ನಾಯಕರ ಜೊತೆ ಚೆನ್ನಾಗಿ ಇದ್ದೇವೆ. ನಮ್ಮ ಬಗ್ಗೆ ಗೌರವ, ವಿಶ್ವಾಸ ಇದೆ. ಬರುವ ದಿನ ಇನ್ನಷ್ಟು ಸಂಪರ್ಕ ಮಾಡಲು ಪ್ರಧಾನಿ ಅಪೇಕ್ಷೆಯಂತೆ ಕೆಲಸ ಮಾಡುತ್ತೇವೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣ ಫೆ.27 ಕ್ಕೆ ಉದ್ಘಾಟನೆ ನಿಶ್ಚಿತ- ಬಿಎಸ್ ವೈ

ಫೆ 27 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುವುದು ನಿಶ್ಚಿತ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.


ಅವರು ವಿಮಾನ ನಿಲ್ದಾಣಕ್ಜೆ ಭೇಟಿಯಾಗಿ ಮಾಧ್ಯಮಗಳಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ.ಸಣ್ಣಪುಟ್ಟ ಕೆಲಸ ಬಾಕಿ ಉಳಿದುಕೊಂಡಿದೆ. ಅವುಗಳನ್ನ ಪೂರ್ಣವಾಗಲಿದೆ ಎಂದರು.

449.28 ಕೋಟಿ ರೂ. ವೆಚ್ಚದಲ್ಲಿ ಏರ್ ಪೋರ್ಟ್ ನಿರ್ಮಾಣ, ನೈಟ್ ನಿರ್ಮಾಣವಾದರೆ ಬೆಂಗಳೂರು ಬಿಟ್ಟರೆ ಶಿವಮೊಗ್ಗ ದೇಶದಲ್ಲಿಯೇ ಅತಿ ದೊಡ್ಡ ನಿಲ್ದಾಣವಾಗಿದೆ. ಫೆ.27 ರಂದು ಪ್ರಧಾನಿಯಿಂದ ಉದ್ಘಾಟನೆ ಎಂದು ತಿಳಿಸಿದರು.

ಭೂಮಿ ಕೊಟ್ಟ ರೈತರಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈತುಂಬ ದಿನದ ಕನಸು ನನಸುಅಗಿದೆ ಎಂದರು.

ನಂತರ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ವಿಮಾನ ನಿಲ್ದಾಣ ನಾಯಕರ ಅಭಿಲಾಷೆಗಳಂತೆ ನೆರವೇರುತ್ತಿದೆ. ಬ್ರಿಗೇಡ್ ಎಫ್ ಪೂರ್ವಿ ಮಠ ನೇತೃತ್ವದಲ್ಲಿ ಅಪಾಯಿಂಟ್ ಮೆಂಟ್ ಆಗ್ತಾ‌ಇದೆ. ನಾಳೆ ಡಿಜಿಸಿಎ ಮತ್ತು ನಾಗರೀಕ ವಿಮಾನ ಯಾನ ಪ್ರಾಧಿಕಾರದಿಂದ ಅನಧಿಕೃತ ಭೇಟಿ ನೀಡಿದ್ದಾರೆ. ಒಂದು ನೂನ್ಯತೆ ಕಂಡರು ಉದ್ಘಾಟನೆ ಕಾರ್ಯಕ್ರಮ ಮುಂದೆ ಹೋಗಲಿದೆ. ಹಾಗಾಗಿ ಅನಧಿಕೃತ ಭೇಟಿ ನೀಡಿ ಅನೇಕ ಸಲಹೆನೀಡಿದ್ದಾರೆ ಎಂದರು

ಯಾವಾಗ ಉದ್ಘಾಟನೆಗೆ ಮನವಿ ಮಸಡಿಕೊಳ್ಳಲಿದ್ದೇವೆ ಆಗ ಪ್ರಧಾನಿ ಭೇಟಿ ಆಗುತ್ತಾರೆ. ಬೆಳಿಗ್ಗೆ ಇನ್ ಫ್ರಾಸ್ಟ್ರಕ್ಚರ್ ಅಧಿಕಾರಿಗಳು ಬಂದು ಹೋಗಿದ್ಸಾರೆ. ಉದ್ಘಾಟನೆ ದಿನಗಳಂದೆ ವಿಮಾನ ಹಾರಾಟವಾಗಲಿದೆ. ಈಗಾಗಾಲೇ ಸ್ಟಾರ್ ಏರ್ ಲೈನ್ಸ್ ಸೇರಿದಂತೆ ನಾಲ್ಕೈದು ವಿಮಾನ ಯಾನ ಸಂಸ್ಥೆಗಳು ಮುಂದೆ ಬಂದಿದ್ದಾರೆ. ಸಧ್ಯಕ್ಕೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ವಿಮಾನ ಹಾರಲಿದೆ. ಪ್ರಧಾನಿ ಅವರ ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಮೂಲ ಉದ್ಘಾಟನೆ ಆಗಲಿದೆ ಎಂದರು.

ಸ್ವಾತಂತ್ರ್ಯ ನಂತರ ರಾಣೇಬೆನ್ಬೂರು ಕೋಚಿಂಗ್ ಡಿಪೋ , 7500 ಕೋಟಿ ವೆಚ್ಚದ ರಾಷ್ಡ್ರೀಯ ಹೆದ್ದಾರಿಯ ನಿರ್ಮಾಣದಲ್ಲಿ 3000 ಸಾವಿರ ಕೋಟಿ ಎನ್ ಹೆಚ್ ಕಾಮಗಾರಿ ಬಾಕಿ ಇದ್ದು ಅದನ್ನೂ ಸಹ ಅಂದು ಶಂಕುಸ್ಥಾಪನೆ ಆಗಲಿದೆ. ,ಮೂರು ಆರ್ ಒಬಿ ಗಳನ್ನ ಮತ್ತು. ಸ್ಮಾರ್ಟ್ ಸಿಟಿ ಕಾಮಗಾರಿಯನ್ನ ಲೋಕಾರ್ಪಣೆ ಆಗಲಿದೆ. ಇವುಗಳನ್ನ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆಎಂದರು.


ಹೌಸ್ ಕೀಪಿಂಗ್ ಗೆ ಮಾತ್ರ ಅವಕಾಶ

ಕೆಲಸಕ್ಕೆ ಸ್ಥಳೀಯರನ್ನ ತೆಗೆದುಕೊಳ್ಳಬೇಕೆಂಬ ಸಾಮಾಜಿಕ ಜಾಲತಾಣದ ಅಭಿಯಾನಕ್ಕೆ ಉತ್ತರಿಸಿದ ಪಿಡಬ್ಲೂಡಿ ಎಕ್ಸಿಕ್ಯುಟಿವ್ ಇಂಜಿನಿಯರ್ ಸಂಪತ್ ಕುಮಾರ್ ಮಾತನಾಡಿ ಇಂತಹ ಅಭಿಯಾನದಲ್ಲಿ ಸತ್ಯವಿಲ್ಲ. ಕಾರಣ ಸರ್ಕಾರದಿಂದಲೇ ಅಧಿಕಾರಿ ಸಿಬ್ಬಂದಿಗಳು ಇಲ್ಲಿಗೆ ಬರಲಿದ್ದಾರೆ. ಅಪಾಯಿಙಟ್ ಮೆಂಟ್ ಗೆ ಅವಕಾಶ ಇಲ್ಲ. ಆದರೆ ಸ್ವಚ್ಛತೇ ಕಾರ್ಯಕ್ಕೆ ಮಾತ್ರ ಸಿಬ್ವಂದಿಗಳನ್ನ ತೆಗೆದುಕೊಳ್ಳಲಾಗುವುದುಎಂದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

11 hours ago

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

14 hours ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

14 hours ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

24 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

1 day ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

2 days ago