ಕಾರು ಕಳ್ಳತನದ ಪ್ರಕರಣವೊಂದರಲ್ಲಿ ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ.
ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು.
14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ ಬೀದಿಯಲ್ಲಿರುವ ತನ್ನ ಹಳೆ ಮನೆ ಬಳಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗ್ಗೆ ಕಳ್ಳತನವಾಗಿದೆ ಎಂದು ಚಂದ್ರು ಕುಮಾರ್ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ದೂರು ನೀಡಿದ್ದ.
ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ, ಚಂದ್ರು ಕುಮಾರ್ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸೇಲ್ಸ್ ಮನ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಎಂಬಾತನೊಂದಿಗೆ ಸಂಚು ರೂಪಿಸಿದ್ದ. ಇದೆ ಕಾರಣಕ್ಕೆ ಚಂದ್ರು ಕುಮಾರ್ ತನ್ನ ಟೊಯೊಟಾ ಯಾರಿಸ್ ಕಾರನ್ನು ಪ್ರಶಾಂತ್ ಗೆ ಕೊಟ್ಟು ದಾವಣಗೆರೆಗೆ ಕಳುಹಿಸಿದ್ದ. ಈ ವೇಳೆ ಕಾರಿನ ನಂಬರ್ ಪ್ಲೇಟನ್ನು ಬದಲಾವಣೆ ಮಾಡಿದ್ದರು.
ತನಿಖೆ ನಡೆಸಿದ ಪೊಲೀಸರು ಕಾರು ಮಾಲೀಕ ಚಂದ್ರು ಕುಮಾರ್ ಮತ್ತು ಪ್ರಶಾಂತ್ ನನ್ನು ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ತುಂಗಾ ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ್, ಪಿಎಸ್ಐ ದೂದ್ಯನಾಯ್ಕ, ಎ.ಎಸ್.ಐ ಮನೋಹರ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ಅರಿಹಂತ ಶಿರಹಟ್ಟಿ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್