ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.




ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು ಅವ್ಯಾಹತವಾಗಿ ಮರಳು ದಂಧೆ ನಡೆಸುತ್ತಿದ್ದಾರೆ. ಅವರನ್ನು ತಡೆಯಲು ಪೊಲೀಸರು ಮುಂದಾಗುತ್ತಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸುಖಾಸುಮ್ಮನೆ ಪ್ರಕರಣ ದಾಖಲು ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇತ್ತೀಚಿಗೆ ಹೆದ್ದೂರು ಸಮೀಪ ಲೈನ್ ಮ್ಯಾನ್ ಒಬ್ಬರು ಮದ್ಯಾನ್ಹದ ವೇಳೆ ಸಾವಿಗಿಡಾದರೂ ಸಂಜೆಯವರೆಗೂ ಅಲ್ಲಿಗೆ ಪೊಲೀಸರು ಭೇಟಿ ನೀಡಿಲ್ಲ. ನಾನು ನನ್ನ ಕೈಯಲ್ಲಿದ್ದ ಐದು ಸಾವಿರ ಹಣವನ್ನು ಕೊಟ್ಟು ಬಂದಿದ್ದೆ. ಅದರಲ್ಲಿ
ಒಂದು ಸಾವಿರ ಹಣ ಪೊಲೀಸರು ಕೇಳುತ್ತಾರಂತೆ. ಕಂಪ್ಲೇಂಟ್ ಕೊಡದಿದ್ದರೆ ತೆಗೆದುಕೊಳ್ಳುವುದಿಲ್ಲವಂತೆ. ಅದೇ ನಮ್ಮ ಕಾರ್ಯಕರ್ತರ ಮೇಲೆ ದೇವರು ಕೂಡ ಕಂಪ್ಲೇಂಟ್ ಕೊಡದಿದ್ದರೂ ಸುಮೊಟೊ ಕಂಪ್ಲೇಂಟ್ ದಾಖಲಿಸುತ್ತೀರಾ ? ಪೊಲೀಸ್ ಇಲಾಖೆ ಬಾಡಿಗೆಗೆ ಇದೆಯಾ ಎಂದು ವಾಗ್ದಾಳಿ ನೆಡೆಸಿದರು.

ಹೆದ್ದೂರು ಬಳಿ ಮರಳು ತುಂಬಲು ಜ್ಞಾನೇಂದ್ರ ಹೇಳಿದ್ದ ಅಥವಾ ನೀವೇ ತುಂಬಿದ್ದ ನನಗೆ ಗೊತ್ತಾಗಬೇಕು. ಆರಗದಲ್ಲಿ 14 ಜನ ಮರಳನ್ನು ಹೊಡೆಯುತ್ತಾಯಿದ್ದಾರೆ. ಅವರನ್ನು ಯಾರು ಹಿಡಿಯಲ್ಲ.ಅದೇ ನಾನು ಮಂತ್ರಿ, ಎಂ ಎಲ್ ಎ ಆದಾಗ ಜ್ಞಾನೇಂದ್ರ ಮರಳು ದಂಡೆಯನ್ನೇ ಬಿಟ್ಟು ಹೊರಗೆ ಬರುತ್ತಿರಲಿಲ್ಲ. ಆಗಿನ ಸಮಯದಲ್ಲಿ ನಾನು ಆನೆ ಹಿಡಿಯಲಿಲ್ಲ ಅಂತ ಕೂಗುತ್ತಿದ್ದರು. ಈಗ ಆನೆ ಆಗುಂಬೆ, ಮುಗುಡ್ತಿ, ಶೆಡ್ಗಾರ್, ಕೊನೆಗೆ ಕುರುವಳ್ಳಿಗೂ ಬಂತು ಆರಗ ಜ್ಞಾನೇಂದ್ರ ನಾಪತ್ತೆಯಾಗಿದ್ದಾರೆ. ಪುಣ್ಯಕ್ಕೆ ತಾಲೂಕು ಕಚೇರಿ ಒಂದಕ್ಕೆ ಆನೆ ಬಂದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.




ಗೃಹ ಇಲಾಖೆಗೆ ರಾಜೀನಾಮೆ ಕೊಡಿ

ಸ್ಯಾಂಟ್ರೋ ರವಿ ಬಳಿ ಜ್ಞಾನೇಂದ್ರ ಅವರು ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಎಚ್ ಡಿ ಕೆ ವಿಡಿಯೋವೊಂದನ್ನು ಬಿಟ್ಟಿದ್ದಾರೆ. ಇನ್ನು ವಿಡಿಯೋ ಬಿಡ್ತೀನಿ ಅಂತಾನೂ ಹೇಳಿದ್ದಾರೆ. ಹಾಗಾಗಿ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ಕೊಡುವುದು ಒಳ್ಳೆಯದು. ಈಗಾಗಲೇ ಭ್ರಷ್ಟಾಚಾರ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಆರೋಪವಿದೆ ಹೀಗಾಗಿ ಗೃಹ ಇಲಾಖೆಗೆ ಆರಗ ಜ್ಞಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು ಎಂದರು.




ವರದಿ : ಅಕ್ಷಯ್ ಕುಮಾರ್
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

11 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago