Headlines

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ.




ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.




ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು ಬಿಟ್ಟು ದೂರ ಉಳಿದಿದ್ದ ಎನ್ನಲಾಗುತ್ತಿದೆ.

ನಿನ್ನೆಯ ದಿನ ರಾತ್ರಿ ಪರ್ವೇಜ್​ ಹಾಗೂ ಆಯಿಷಾ ಭದ್ರಾವತಿಗೆ ಬಂದು ಹೆರಿಟೇಜ್ ಲಾಡ್ಜ್​​ ನಲ್ಲಿ ರೂಮ್​ ಮಾಡಿಕೊಂಡಿದ್ದಾರೆ. ನಿನ್ನೆ ರೂಮ್​ನಲ್ಲಿ ಆಯೇಶಾ ಹಾಗೂ ಪರ್ವೇಜ್​ ನಡುವೆ ಜಗಳವಾಗಿದೆ.




ಈ ವೇಳೆ ಪರ್ವೇಜ್​ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಳಿಕ ರೂಮಿನಿಂದ ಆಯೇಶಾ ವಾಪಸ್ ತೆರಳಿದ್ದಾಳೆ.

ಮೂಲಗಳ ಪ್ರಕಾರ ಪ್ರೇಯಸಿ ಹಾಸನದಲ್ಲಿ ಪೊಲೀಸರಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.

ಸದ್ಯ ಸ್ಥಳಕ್ಕೆ ಓಲ್ಡ್ ಟೌನ್​ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟಿದ್ದು ಪರಿಶೀಲನೆ ನಡೆಸ್ತಿದ್ದಾರೆ.



Leave a Reply

Your email address will not be published. Required fields are marked *

Exit mobile version