ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.
ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು.
ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು ತೀರ್ಮಾನಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಶಾಂತವೇರಿ ಗೋಪಾಲಗೌಡ ಅಧ್ಯಯನ ಸಮಿತಿಯ ಅಧ್ಯಕ್ಷರಾದ ಕಲ್ಲೂರು ಮೇಘರಾಜ್ ವಹಿಸಿದ್ದರು.
ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್, ನಗರ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರ ಶೆಟ್ಟಿ,ಮಾಜಿ ಅಧ್ಯಕ್ಷ ಬೇಳೂರು ದೇವೆಂದ್ರಪ್ಪ, ಮುಖಂಡರಾದ ಎಸ್ ವಿ ರಾಜಮ್ಮ ,ರವೀಂದ್ರ ,ಅಂಬರೀಶ್ ,ಮಾಸ್ತಿಕಟ್ಟೆ ಗೋಪಾಲ್ , ಚಂದ್ತಶೇಖರ್ ಶೆಟ್ಟಿ ,ಕಲ್ಲೂರು ಈರಣ್ಣ ಹಾಗೂ ಇನ್ನಿತರರಿದ್ದರು.
ಇದೇ ಸಭೆಯಲ್ಲಿ ದಿವಂಗತ ಶಾಂತವೇರಿ ಗೋಪಾಲ್ ಗೌಡ ಶತಮಾನೋತ್ಸವ ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಗೌರವಾಧ್ಯಕ್ಷ ; ಕಲ್ಲೂರು ಮೇಘರಾಜ್
ಅಧ್ಯಕ್ಷರು : ಬೇಳೂರು ದೇವೇಂದ್ರಪ್ಪ
ಕಾರ್ಯಾಧ್ಯಕ್ಷ : ಆರ್ ಎ ಚಾಬುಸಾಬ್
ಉಪಾಧ್ಯಕ್ಷರು : ಕರುಣಾಕರ ಶೆಟ್ಟಿ, ರವೀಂದ್ರ ಮತ್ತು ಎಸ್ ವಿ ರಾಜಮ್ಮ
ಪ್ರಧಾನ ಕಾರ್ಯದರ್ಶಿ : ಮಾಸ್ತಿಕಟ್ಟೆ ಎಸ್ ಕೆ ಗೋಪಾಲ್
ಕಾರ್ಯದರ್ಶಿ : ಕುಮಾರ್
ಖಜಾಂಚಿ : ಸಾದ್ಗಲ್ ಅಂಬರೀಶ್
ಹಾಗೂ ಸದಸ್ಯರನ್ನು ನೇಮಿಸಲಾಯಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್