ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ.
ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ.
ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ ಬಡ ಮಕ್ಕಳ ಬದುಕನ್ನು ಹಸನಾಗಿಸುವ ಮುಖ್ಯ ಶಿಕ್ಷಕಿ ವರ್ಗಾವಣೆ ಖಂಡಿಸಿ 95ಕ್ಕೂ ಹೆಚ್ಚು ಮಕ್ಕಳು ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಹೆಗ್ಗೋಡು ಶಾಲೆಯಲ್ಲಿ ಶಾಲೆಗೆ ಬೀಗ ಹಾಕಿ ಮಕ್ಕಳೇ ಪ್ರತಿಭಟನೆ ನಡೆಸಿ ಇದೀಗ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಅಪರೂಪದ ಘಟನೆ ನಡೆದಿದೆ. ಜೊತೆಗೆ ಯಾವುದೇ ಮಕ್ಕಳು ಶಾಲೆಗೆ ಬರುವುದಿಲ್ಲ ಎಂದು ಹಠ ಹಿಡಿದು ಶಾಲೆಯ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಮಿಸಿ ಮನವಿ ಸ್ವೀಕಾರ ಮಾಡಿದ್ದಾರೆ. ಸರ್ಕಾರ ಅಭಿವೃದ್ಧಿ ಹೊಂದುತ್ತಿರುವ ಸರಕಾರಿ ಶಾಲೆಯನ್ನು ಮುಖ್ಯ ಶಿಕ್ಷಕಿ ಶ್ರೀದೇವಿ ಅವರ ವರ್ಗಾವಣೆ ಮಾಡುವ ಮೂಲಕ ಸರ್ಕಾರ ಮಕ್ಕಳ ಭವಿಷ್ಯಕ್ಕೆ ಕುತ್ತು ತಂದಿದೆ.. ಕೂಡಲೇ ವರ್ಗಾವಣೆ ಹಿಂಪಡೆಯಬೇಕು.
ಕಾನೂನು ಪ್ರಕಾರ ಶಾಲೆಗೆ 4 ಶಿಕ್ಷಕರು ಬೇಕು. ಆದರೆ ಇರುವ ಶಿಕ್ಷಕರನ್ನೇ ತೆಗೆಯಲು ಹೊರಟಿದೆ. ಶಾಲೆಯನ್ನು ಅತ್ಯಂತ ಅಭಿವೃದ್ಧಿ ಮಾಡಿ ಮಕ್ಕಳ ಭವಿಷ್ಯ ರೂಪಿಸಿರುವ ಶಿಕ್ಷಕಿಯನ್ನು ವರ್ಗಾವಣೆ ಮಾಡಿದರೆ ನಾವು ನಮ್ಮ ಮಕ್ಕಳನ್ನು ಈ ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದ ಘಟನೆ ಕೂಡ ನಡೆಯಿತು.
ಬೇಡಿಕೆ ಈಡೇರಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ ಎಂದು ಪೋಷಕರು ಬಿಇಒ ಕಚೇರಿ ಪ್ರತಿಭಟನೆಗೆ ಸಿದ್ದರಾಗಿದ್ದಾರೆ. ಪ್ರತಿಭಟನೆ ವೇಳೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಂದ್ರ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು, ಪೋಷಕರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್