ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ.




ಪಟ್ಟಣದ ನಾಲ್ಕು ರಸ್ತೆಯ ಎರಡೂ ಬದಿಗಳಲ್ಲಿ ದಿನ ಬಿಟ್ಟು ದಿನ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದ್ದು,ಒಂದು ದಿನ ರಸ್ತೆ ಎಡ ಬದಿಯಲ್ಲಿ ಇನ್ನೊಂದು ದಿನ ಬಲ ಬದಿಯಲ್ಲಿ ಪಾರ್ಕಿಂಗ್ ಮಾಡಬೇಕು.ಇನ್ಮುಂದೆ ಪಾರ್ಕಿಂಗ್ ವ್ಯವಸ್ಥೆ ಪಾಲಿಸದಿದ್ದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ. ವಾಹನ ಮಾಲೀಕರು ದಂಡ ಪಾವತಿಸಿ ತಮ್ಮ ವಾಹನವನ್ನು ಬಿಡಿಸಿಕೊಂಡು ಹೋಗಬೇಕಾಗುತ್ತದೆ.

ಈ ಮೊದಲು ಪಟ್ಟಣದ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡಲಾಗುತ್ತಿತ್ತು. ಈಗ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡಿರುವುದರಿಂದ ಜನರಿಗೆ ಮತ್ತು ರಸ್ತೆಯಲ್ಲಿ ಓಡಾಡುವ ಇತರೆ ವಾಹನಗಳಿಗೆ ಪ್ರಯೋಜನಕಾರಿಯಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಪಟ್ಟಣದಲ್ಲಿ ನಾಲ್ಕು ರಸ್ತೆಗಳಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಒಂದು ದಿನ ರಸ್ತೆ ಎಡ ಬದಿಯಲ್ಲಿ ಇನ್ನೊಂದು ದಿನ ಬಲ ಬದಿಯಲ್ಲಿ ಪಾರ್ಕಿಂಗ್ ಮಾಡಬೇಕು.ತಪ್ಪಿದ್ದರೆ ದಂಡ ಬೀಳುವುದು ಖಚಿತ ಹೀಗಾಗಿ ವಾಹನ ಮಾಲೀಕರು ಎಚ್ಚರ ವಹಿಸುವುದು ಅಗತ್ಯವಾಗಿದೆ.

ಪಟ್ಟಣದ ನಾಲ್ಕು ರಸ್ತೆಗಳಲ್ಲಿನ ಅಂಗಡಿಗಳ ಮಾಲೀಕರು ಪೊಲೀಸ್ ಇಲಾಖೆಯ ಜೊತೆ ಕೈಜೋಡಿಸಿ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆ ವಾಹನ ಚಾಲಕರಿಗೆ ಮನವರಿಕೆ ಮಾಡಿಕೊಟ್ಟಲ್ಲಿ ಆದಷ್ಟು ಬೇಗ ನೂತನ ಪಾರ್ಕಿಂಗ್ ವ್ಯವಸ್ಥೆಯನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬಹುದಾಗಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

2 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

2 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

6 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

21 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

21 hours ago