ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು.




ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ ಸದಸ್ಯರು ತಮ್ಮ ಶಕ್ತಿ ಮೀರಿ ಪ್ರತಿಭೆಗಳನ್ನು ಹೊರ ಹಾಕಿದ್ದಾರೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವಂತಾಗಲಿ ಎಂದರು.


ನಂತರ ಕಾಲೇಜಿನ ಉಪನ್ಯಾಸಕರು ಮತ್ತು ಆರುಣ್ಯ ಕಿರುಚಿತ್ರದ ಕಥೆ ಮತ್ತು ಚಿತ್ರಕಥೆ ರಚಿಸಿದಂತಹ ನರೇಂದ್ರ ಕುಳಗಟ್ಟೆ ಎಂ ಆರ್ ಮಾತನಾಡಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಾವಂತರು ಅವರಿಗೆ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದಲ್ಲಿ ಎಂತಹ ಪ್ರದರ್ಶನ ನೀಡುತ್ತಾರೆ ಎಂಬುವುದಕ್ಕೆ ನಮ್ಮ ಆರುಣ್ಯ ಕಿರುಚಿತ್ರ ಸಾಕ್ಷಿಯಾಗಿದೆ.ವಿದ್ಯಾರ್ಥಿಗಳು ತುಂಬಾ ಕಷ್ಟಪಟ್ಟು, ಶ್ರಮ ಪಟ್ಟು ಈ ಕಿರುಚಿತ್ರ ರಚಿಸಿದ್ದಾರೆ‌.ಹಾಗೇಯೆ ಕಾಲೇಜಿನ ವಿದ್ಯಾರ್ಥಿಗಳೇ ಪ್ರಾರಂಭಿಸಿರುವ ನೂತನ ಯೂಟ್ಯೂಬ್ ಚಾನೆಲ್ ನ್ನು ಬೆಂಬಲಿಸುವಂತೆ ಮನವಿ ಮಾಡಿದರು.


ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ದ ಹಿಂದೂ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ತನು ಕುಲಕರ್ಣಿ ,ಉಪನ್ಯಾಸಕರಾದ ಶ್ರೀಪತಿ ಹಳಗುಂದ ಸೇರಿದಂತೆ ಇನ್ನಿತರರಿದ್ದರು.




ಆರುಣ್ಯ ಕಿರುಚಿತ್ರ:


ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ ,ನಟಿಸಿದಂತಹ ಆರುಣ್ಯ ಕಿರುಚಿತ್ರದ ಟ್ರೈಲರ್ ತುಂಬಾ ಅಧ್ಬುತವಾಗಿ ಮೂಡಿಬಂದಿದೆ.


ಈ ಕಿರುಚಿತ್ರದ ಮುಖ್ಯಪಾತ್ರದಲ್ಲಿ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಪಿ ಟಿ ನಟಿಸಿದ್ದಾರೆ. ದೀಕ್ಷಾ ,ಚಿದಾನಂದ ,ತೇಜಶ್ರಿ ಯು,ಮೇಘಾ ,ತೇಜಸ್ವಿನಿ ತಮ್ಮ ಪ್ರತಿಭೆಯ ಮೂಲಕ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಈ ಕಿರುಚಿತ್ರವನ್ನು ಪ್ರದೀಪ್ ಆಚಾರ್ ನಿರ್ಮಿಸಿದ್ದು ,ಕಥೆ – ಚಿತ್ರಕಥೆ- ಪರಿಕಲ್ಪನೆ ಉಪನ್ಯಾಸಕ ನರೇಂದ್ರ ಕುಳಗಟ್ಟೆ ರಚಿಸಿದ್ದಾರೆ. ನಿರ್ದೇಶನವನ್ನು ವಿದ್ಯಾ ಆರ್ ಆಚಾರ್ಯ ,ತೇಜಶ್ರಿ ಯು ,ಸ್ಪಂದನಾ ಪಿ ಟಿ ನಿಭಾಯಿಸಿದ್ದಾರೆ.

ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ರಚಿಸಿರುವ ಸ್ಪೀಕಿಂಗ್ ಏಂಜೆಲ್ಸ್ ಯೂಟ್ಯೂಬ್ ಚಾನೆಲ್ ನ್ಮು subscribe ಆಗಲು ಈ ಕೆಳಗಿನ ಲಿಂಕ್ ಒತ್ತಿ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

2 hours ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

2 hours ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

12 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

18 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

1 day ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

1 day ago