ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.
ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು.
ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು ಗ್ಯಾಸ್ ಸ್ಟೌ ಮೇಲೆ ಇರಿಸಿ ಸುಟ್ಟು ಹಾಕುವ ಪ್ರಯತ್ನ ಮಾಡಿದ್ದರು. ಆಗ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಇದನ್ನು ತಡೆದು, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಕರ್ನಾಟಕ ಪುರಸಭಾ ಕಾಯ್ದೆಯನ್ವಯ ತಕ್ಷಣ ಜಾರಿಗೆ ಬರುವಂತೆ ಹರೀಶ್ ಗೌಡ ಅವರನ್ನು ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್