ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ.
ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್ ಮ್ಯಾನ್ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು.
ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ.
ಲೈನ್ ಮ್ಯಾನ್ ಶ್ರೀಶೈಲಾ ಟ್ರಾನ್ಸಫಾರಮ್ನ ಫೀಡರ್ ಲೈನ್ ಸಪ್ಲೆಗಳನ್ನು ಕಡಿತಗೊಳಿಸಿದ್ಧಾನೆ. ಆದರೂ ಈ ದುರ್ಘಟನೆ ಸಂಭವಿಸಿದೆ. ಎಲ್ಸಿ ತೆಗೆದುಕೊಂಡಿದ್ಧಾಗಲೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.
ವಿದ್ಯುತ್ ಸಿಬ್ಬಂದಿಗಳು ಹೇಳುವ ಪ್ರಕಾರ, ಬೇರೊಂದು ಲೈನ್ ತಾಗಿ ವಿದ್ಯುತ್ ಪ್ರವಹಿಸಿರಬಹುದು ಎನ್ನಲಾಗುತ್ತಿದೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್