ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.




ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಈ ಪ್ರಕರಣಗಳಲ್ಲಿ ವಾಹನಗಳ ಚಾಲಕರ ಅಜಾಗ್ರಕತೆಯ ಬಗ್ಗೆ ಕೂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.


ಬದುಕಿ ಬಾಳಬೇಕಾದ, ಉಜ್ವಲ ಭವಿಷ್ಯದ ಕನಸನ್ನು ಹೊತ್ತ ವಿದ್ಯಾರ್ಥಿಗಳು ಅಕಾಲಿಕವಾಗಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವುದನ್ನು ಕಂಡು ಶಾಸಕರು ನೊಂದಿದ್ದರು.  ಈ ಹಿನ್ನೆಲೆಯಲ್ಲಿ ತಾವೇ ಸ್ವತಃ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತ ಆಗದಂತೆ ಸುರಕ್ಷತೆಯನ್ನು ವಹಿಸುವಂತೆ ಖುದ್ದು ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕೆಲಸ ಮಾಡುತ್ತಿದ್ದಾರೆ.

ಕಾರಿನಲ್ಲಿ ಹೋಗುತ್ತಿದ್ದ ಶಾಸಕ ಹರತಾಳು ಹಾಲಪ್ಪ ಪಾದಚಾರಿ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸಿದರು. ಇತ್ತೀಚೆಗೆ ನೆಡೆಯುತ್ತಿರುವ ಅಪಘಾತ ಪ್ರಕರಣಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಎಷ್ಟು ಜಾಗ್ರತೆ ವಹಿಸಿದರು ಸಾಲದು. ಶಾಸಕ ಹಾಲಪ್ಪ  ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮದ್ಯ ಕಾಲೇಜು ವಿದ್ಯಾರ್ಥಿಗಳು ಗುಂಪು ನೋಡಿದ್ದಾರೆ. 5 -6 ಜನರ ಗುಂಪು ಅಕ್ಕಪಕ್ಕ ನಡೆಯುತ್ತಾ ವಾಹನ ಸಂಚಾರಕ್ಕೆ ಅವಕಾಶ ನೀಡದೆ ರಸ್ತೆಯಲ್ಲಿ ಸಂಚರಿಸುತ್ತಿರುವುದನ್ನು ಗಮನಿಸಿದ್ದಾರೆ. ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಪಾಠ ಹೇಳಿದ್ದಾರೆ. ಅಪಘಾತ ನಡೆದಾಗ ಚಾಲಕನ ಅಜಾಗರೂಕತೆ ಎಂದು ಹೇಳುವುದರಿಂದ ಪ್ರಯೋಜನವಿಲ್ಲ. ಅಪಘಾತ ನಡೆಯದಂತೆ ಎಚ್ಚರ ವಹಿಸುವುದು ಕೂಡ ಪಾದಚಾರಿಗಳ ಕರ್ತವ್ಯ ರಸ್ತೆಯಲ್ಲಿ ನಡೆಯುವಾಗ ಬಲಬಾಗದಲ್ಲಿ ನಡೆಯಬೇಕು ಎನ್ನುವ ಬದಲಾದ ನಿಯಮದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.




ರಸ್ತೆಯ ಬಲಭಾಗದಲ್ಲಿ ನಡೆದರೆ ಎದುರಿನಿಂದ ಬರುವ ವಾಹನಗಳು ಕಾಣಿಸುತ್ತದೆ.  ಅದೇ ರಸ್ತೆಯ ಎಡ ಭಾಗದಲ್ಲಿ ನಡೆದರೆ ಹಿಂಬದಿಂದ ಬರುವ ವಾಹನಗಳು ಕಾಣಿಸುವುದಿಲ್ಲ.  ಎಡ ಭಾಗದಲ್ಲಿ ನಡೆಯುವುದರಿಂದ ಅಪಘಾತಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ಪ್ರತಿಯೊಬ್ಬರ ಜೀವ ಮತ್ತು ಬದುಕು ಮುಖ್ಯ ರಸ್ತೆಯಲ್ಲಿ ಸುರಕ್ಷಿತವಾಗಿ ಸಂಚರಿಸಿ ಎಂದು ತಿಳಿ ಹೇಳಿದರು.




ರಸ್ತೆ ಸುರಕ್ಷತೆ ಬಗ್ಗೆ ಕೇಳಿದ ವಿದ್ಯಾರ್ಥಿಗಳು ಹಾಗೆಯೇ ಪಾಲಿಸುವುದಾಗಿ ಹೇಳಿದ್ದಲ್ಲದೆ ಶಾಸಕರಿಗೆ ಧನ್ಯವಾದಗಳು ತಿಳಿಸಿ ಮುಂದೆ ಸಾಗಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

3 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago