ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ.
ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ.
ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು ತೊರೆದು ಮನೆಯೊಳಗೆ ಇದ್ದ ಸಿಲಿಂಡರ್ ಅನ್ನು ಹೊರಕ್ಕೆ ತಂದಿದ್ದಾರೆ. ಆದರೆ ಘಟನೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ.
ಘಟನಾ ಪ್ರದೇಶದಲ್ಲಿ ಆವರಿಸಿಕೊಂಡ ದಟ್ಟ ಹೊಗೆಯಿಂದಾಗಿ ಸಿಗಂದೂರು ಮಾರ್ಗದ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸಮಯ ಪ್ರಜ್ಞೆ ಮೆರೆದ ಯುವಕರ ತಂಡ
ಇನ್ನು ಬೆಂಕಿಯು ತನ್ನ ಕೆನಾಲಿಗೆಯನ್ನು ವಿಸ್ತರಿಸಿ ದಟ್ಟವಾದ ಹೊಗೆ ಆವರಿಸಿದ ಸಂದರ್ಭ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ಪೈಪ್ ಮೆದುವಾಗಿ ಗ್ಯಾಸ್ ಸೋರಿಕೆಯಾಗುವ ಲಕ್ಷಣಗಳು ಕಂಡುಬರುತ್ತಿತ್ತು ಇದನ್ನು ಗಮನಿಸಿದ ಅಲ್ಲಿನ ಯುವಕರು ತಮ್ಮ ಜೀವದ ಹಂಗು ತೊರೆದು ಮನೆಯ ಹಿಂಬದಿಯ ಕಿಟಕಿ ಒಡೆದು ಒಳಗೆ ನುಸುಳಿ ನಡೆಯಬೇಕಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಯುವಕರ ಸಮಯ ಪ್ರಜ್ಞೆಗೆ ಸಾರ್ವಜನಿಕರು ಮುಕ್ತವಾಗಿ ಶ್ಲಾಘಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಬೇಳೂರು
ಘಟನಾ ಸ್ಥಳಕ್ಕೆ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕರು ಗೋಪಾಲಕೃಷ್ಣ ಬೇಳೂರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಾಜನಂದಿನಿ ಕಾಗೋಡು ರವರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮನೆ ಮಾಲೀಕರ ನೋವಿಗೆ ಸ್ಪಂದಿಸಿದರು.
ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯ ಸೈಯದ್ ಜಾಕೀರ್.ಸಯ್ಯದ್ ಜಹೂರ್. ಮಧುಮಾಲತಿ.ಗಣಪತಿ ಮಂಡಗಳಲೆ. ಸದ್ದಾಂ ದೊಡ್ಮನೆ. ಟೈಲ್ಸ್ ಇಮ್ರಾನ್. ಕೇಶವ.ಶಕಿಬ್.ಅಸದ್ ಹಾಗೂ ಮೊದಲಾದವರು ಇದ್ದರು
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್