ಸಾಗರ ಬಂದ್ ಸಂಪೂರ್ಣ ಯಶಸ್ವಿ – ಅಜಾದ್ ರಸ್ತೆಯಲ್ಲಿ ಮಾತಿನ ಚಕಮಕಿ : ಕೊಲೆ ಯತ್ನ ಘಟನೆಗೆ ರೋಚಕ ಟ್ವಿಸ್ಟ್|sagara


ಸಾಗರದಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಸಾಗರದ ಮೀನು ಮಾರುಕಟ್ಟೆಯ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಂದ್ ಮಾಡಿಸಲು ಬಂದಾಗ ಮಾತಿನ ಚಕಮಕಿ ನಡೆದಿದೆ. ಮಾರ್ಕೆಟ್ ನಲ್ಲಿ ಹಿಂದೂ ಸಂಘಟನೆಯ ಗುಂಪು ಸಾಗರದ ಬಂದ್ ಹಿನ್ಬಲೆಯಲ್ಲಿ ಮೀನು ಮಾರ್ಕೆಟ್ ಬಂದ್ ಮಾಡಿಸಲು ಮುಂದಾದಾಗ ಸ್ಥಳೀಯರು ಬಂದ್ ಮಾಡಲು ನಿರಾಕರಿಸಿದ್ದಾರೆ.

ಪರಸ್ಪರ ಘೋಷಣೆ ಕೂಗಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಕೂಗಿದರೆ ಸ್ಥಳೀಯರು ಅಲ್ಲಾಹೋ ಅಕ್ಬರ್ ಎಂಬ ಘೋಷಣೆ ಕೂಗಿದ್ದಾರೆ. ಪರಸ್ಪರ ಕಣ್ಣಿನಲ್ಲೇ ಗುರಾಯಿಸುವ ದೃಶ್ಯಗಳು ನಡೆದಿದೆ.

ನಂತರ ಎಎಸ್ಪಿರೋಷನ್ ಜಗದೀಶ್ ಪರಿಸ್ಥಿತಿಯನ್ನ ಕೂಲ್ ಮಾಡಿದ್ದಾರೆ.

ಸಾಗರದಗಣಪತಿದೇವಸ್ಥಾನದಿಂದ ಮೆರವಣಿಗೆ ಹೊರಟು ಶಿವಪ್ಪ ನಾಯಕ ಮಾರ್ಕೆಟ್ ಮೀನು ಮಾರುಕಟ್ಟೆ ಹಿಂಬದಿ ರಸ್ತೆಯ ಮೂಲಕ ಬಸ್ ನಿಲ್ದಾಣ ತಲುಪಲಿದೆ.

ಆಜಾದ್ ರಸ್ತೆ,ಯಲ್ಲಿ ಗಣಪತಿ ಮೆರವಣಿಗೆಯಾಗಲೀ ಇತರೆ ಯಾವೂದೇ ಮೆರವಣಿಗೆ ನಡೆದಿಲ್ಲ. ಇಂದು ಬಜರಂಗ ದಳದ ಸಾಗರ ಬಂದ್ ಮೆರವಣಿಗೆ ಬಿಟ್ಟಿರುವ ಬಗ್ಗೆ ಸ್ಥಳೀರು ಆಕ್ಷೇಪಿಸಿದ್ದಾರೆ.

ಬಿಗ್ ಟ್ವಿಸ್ಟ್ ಪಡೆದುಕೊಂಡ ಪ್ರಕರಣ

ಸಾಗರದ ನೆಹರೂ ನಗರದಲ್ಲಿ ಬಜರಂಗ ದಳ ಸಹ ಸಂಚಾಲಕ ಸುನಿಲ್‌ ಹತ್ಯಾ ಯತ್ನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದು ಹಿಂದು ಮತ್ತು ಮುಸ್ಲಿಂ ಸಂಘರ್ಷ ಎಂದು ಇದುವರೆಗೆ ಹೇಳಲಾಗಿತ್ತು. ಆದರೆ, ಇದು ವೈಯಕ್ತಿಕ ಜಗಳದಿಂದ ನಡೆದಿರುವ ಹಲ್ಲೆ ಯತ್ನ.

ಸುನಿಲ್‌ ತನ್ನ ಸೋದರಿಯನ್ನು ಚುಡಾಯಿಸಿದ್ದರಿಂದ ಸಿಟ್ಟುಗೊಂಡು ಸಮೀರ್‌ ಹಲ್ಲೆಗೆ ಮುಂದಾಗಿದ್ದಾನೆ ಎಂದು ಎಸ್‌ಪಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸುನಿಲ್‌ ಸಮೀರ್‌ನ ಸೋದರಿಯನ್ನು ಚುಡಾಯಿಸಿದ್ದಕ್ಕೆ ಸಂಬಂಧಿಸಿದ ಕಾಲ್‌ ರೆಕಾರ್ಡ್ಸ್‌ ಕೂಡಾ ಸಿಕ್ಕಿದೆ ಎಂದು ಎಸ್ಪಿ ಹೇಳಿದ್ದಾರೆ.

ಬಜರಂಗ ದಳದ ನಗರ ಸಹ ಸಂಚಾಲಕ ಸುನೀಲ್ ಅವರು ಸೋಮವಾರ ಬೆಳಗ್ಗೆ ಬೈಕ್‍ನಲ್ಲಿ ತಮ್ಮ ಮನೆಯಿಂದ ಬಿ.ಎಚ್. ರಸ್ತೆಯ ಆಭರಣ ಜ್ಯುವೆಲರ್ಸ್ ಪಕ್ಕದ ಜಿಯೋ ಕಚೇರಿಗೆ ಹೋಗುತ್ತಿದ್ದಾಗ ಸಮೀರ್‌ ಎಂಬಾತ ತಲವಾರಿನಿಂದ ಹಲ್ಲೆ ಮಾಡಲು ಮುಂದಾಗಿದ್ದ. ಅದೃಷ್ಟವಶಾತ್‌ ಸುನಿಲ್‌ ಕೂದಲೆಳೆ ಅಂತರದಿಂದ ತಪ್ಪಿಸಿಕೊಂಡಿದ್ದಾರೆ.

ಸಮೀರ್‌ನ ಪತ್ತೆಗಾಗಿ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದ ಸಾಗರ ಟೌನ್ ಪೊಲೀಸರು ಸಮೀರ್‌ನನ್ನು ಬಂಧಿಸಿದ್ದಾರೆ. ಜತೆಗೆ ಆತನ ಜತೆ ಸೇರಿದ್ದಾರೆ ಎಂದು ಹೇಳಲಾದ ಇಮಿಯಾನ್‌ ಮತ್ತು ಮನ್ಸೂರ್‌ ಅವರನ್ನೂ ಬಂಧಿಸಲಾಗಿದೆ.

ಇದೀಗ ಸಮೀರ್‌ನ ವಿಚಾರಣೆ ಸಂದರ್ಭ ಕೊಲೆ ಯತ್ನದ ಹಿಂದಿನ ಕಾರಣಗಳು ಬಯಲಾಗಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

2 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

2 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

2 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

23 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

1 day ago