ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು.


ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ ನಮ್ಮ ಸ್ಪರ್ಧೆ ಎಲ್ಲಾ ಪಕ್ಷಗಳ ನಿದ್ದೆಗೆಡಿಸಿವೆ.

ಆಮ್ ಆದ್ಮಿ ಪಕ್ಷದ ಪ್ರಣಾಳಿಕೆಯ ಕೃತಿ ಚೌರ್ಯ :


ರಾಜ್ಯದಲ್ಲಿ ಆಡಳಿತರೂಡ ಬಿಜೆಪಿ ಪಕ್ಷ ಕೇವಲ ಭ್ರಷ್ಟಾಚಾರ ನಡೆಸುವುದರಲ್ಲೇ ನಿರತವಾಗಿದೆಯೇ ಹೊರತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಿಂಚಿತ್ತೂ ಚಿಂತಿಸುತಿಲ್ಲ,ಇನ್ನೂ ಕಾಂಗ್ರೆಸ್ ಪಕ್ಷ ತನ್ನ ಇತಿಹಾಸದಲ್ಲಿಯೇ ಚುನಾವಣಾ ಪೂರ್ವ ಯಾವುದೇ ಯೋಜನೆ ಘೋಷಿಸುತ್ತಿರಲಿಲ್ಲ ಆದರೆ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರಣಾಳಿಕೆಯ ಕೆಲ ಯೋಜನೆಗಳನ್ನು ಕೃತಿಚೌರ್ಯ ನಡೆಸಿ ತನ್ನದೇ ಯೋಜನೆ ಎಂಬಂತೆ ಬಿಂಬಿಸಿಕೊಳ್ಳುವಂತಹ ಹತಾಶ ಪರಿಸ್ಥಿತಿಗೆ ಬಂದಿದೆ ಎಂದರು.




ಪಿಂಪ್ ಗಳ ಬಳಿ ವ್ಯವಹಾರ ಮಾಡುವಂತಹ ಕೆಟ್ಟ ಮನಸ್ಥಿತಿ ಆರಗ ಜ್ಞಾನೇಂದ್ರ ಅವರದ್ದಲ್ಲ :


ಪಿಎಸ್ ಐ ಹಗರಣ ಮತ್ತು ಸ್ಯಾಂಟ್ರೋ ರವಿ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಆರಗ ಜ್ಞಾನೇಂದ್ರ ಒಳ್ಳೆಯ ವ್ಯಕ್ತಿ ಆದರೆ ಒಬ್ಬ ಒಳ್ಳೆಯ ವ್ಯಕ್ತಿ ಎಂದಿಗೂ ಒಳ್ಳೆಯ ಗೃಹ ಸಚಿವನಾಗುವುದಿಲ್ಲ ಎಂಬುವುದನ್ನು ಜ್ಞಾನೇಂದ್ರ ಸಾಬೀತುಪಡಿಸಿದ್ದಾರೆ.ಪಿಂಪ್ ಗಳ ಬಳಿಯಲ್ಲಿ ವ್ಯವಹಾರ ಮಾಡುವಂತಹ ಕೆಟ್ಟ ಮನಸ್ಥಿತಿ ಆರಗ ಜ್ಞಾನೇಂದ್ರ ಅವರದ್ದಲ್ಲ ಆದರೆ ಅವರ ಬೆನ್ನ ಹಿಂದಿರುವ ವ್ಯವಸ್ಥೆ ಪಿಂಪ್ ಗಳ ರಕ್ಷಣೆ ಮಾಡುವಂತೆ ಪ್ರೇರೆಪಿಸುತ್ತದೆ ಆದ್ದರಿಂದ ನಮ್ಮ ಜಿಲ್ಲೆಯ ಗೌರವಕ್ಕೆ ಚ್ಯುತಿ ತರದೇ ಗೃಹ ಸಚಿವ ಸ್ಥಾನ ತೊರೆದು ತೋಟಗಾರಿಕೆ ,ಈರುಳ್ಳಿ ಅಥವಾ ಬೆಳ್ಳುಳ್ಳಿ ಸಚಿವರಾಗಲಿ ಎಂದು ಹೇಳಿದರು.

ಐಪಿಸಿ ಸೆಕ್ಷನ್ ಬಗ್ಗೆ ಅರಿವಿಲ್ಲದ ಗೃಹ ಸಚಿವ :


ಒಬ್ಬ ಗೃಹ ಸಚಿವನಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಇವರಿಗೆ ಐಪಿಸಿ ಸೆಕ್ಷನ್ ಬಗ್ಗೆ ಅರಿವಿಲ್ಲ ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ, ಪ್ರಚೋದನೆ ಕೊಡುವುದು ಕೂಡಾ ಅಪರಾಧ ಅಂತಹದರಲ್ಲಿ ಸಾರ್ವಜನಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವುದು ಒಬ್ಬ ಅಸಹಾಯಕ ಗೃಹಮಂತ್ರಿಯ ಆಕ್ರಂದನ,ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಅವರ ಮೇಲೆ ಕ್ರಮ ಕೈಗೊಳ್ಳಲಿ ಎಂದರು.




ಎಂಎಸ್ ಐಎಲ್  ಮಳಿಗೆಗಳನ್ನು ಬಿಜೆಪಿ ಕಚೇರಿಗಳನ್ನಾಗಿ ಮಾಡಿಕೊಂಡಿದ್ದಾರೆ  ಶಾಸಕ ಹರತಾಳು ಹಾಲಪ್ಪ :


ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ರವರು ಎಂಎಸ್ ಐಎಲ್ ಮಳಿಗೆ ತೆರೆಯುವುದೇ ಅಭಿವೃದ್ಧಿ ಎಂದುಕೊಂಡಿದ್ದಾರೆ.ಅದರಲ್ಲೂ ಎಂಎಸ್ ಐಎಲ್ ಮಳಿಗೆ ಕೇವಲ ಬಿಜೆಪಿ ಬಾವುಟ ಹಿಡಿದವರಿಗೆ ಮಾತ್ರ ಕೊಡುವುದರ ಮೂಲಕ ಎಂಎಸ್ ಐಎಲ್ ಅಂಗಡಿಯನ್ನು ಬಿಜೆಪಿ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ,ಗಣಪತಿ ಕೆರೆ ಅಭಿವೃದ್ಧಿ ಮಾಡಿದ್ದೇನೆ ಎನ್ನುವ ಇವರು ಆ ಕಾಮಗಾರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಹೊಣೆ ಹೊರಬೇಕಾಗುತ್ತದೆ.ಈ ಬಗ್ಗೆ ಆದ್ಮಿ ಪಕ್ಷ ಲೋಕಾಯುಕ್ತಕ್ಕೆ ಎಲ್ಲಾ ಬಗೆಯ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದರು.

ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕೆಲವು  ಅಧಿಕಾರಿಗಳು  ಆಡಳಿತ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ :


ಇನ್ನೂ ಸಾಗರ ವಿಧಾನಸಭಾ ಕ್ಷೇತ್ರದ ಕೆಲ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸದೇ ಆಡಳಿತ ಪಕ್ಷದ ಏಜೆಂಟ್ ರೀತಿ ವರ್ತಿಸುತಿದ್ದಾರೆ ಅಂತಹವರ ಮೇಲೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಮತ್ತು ಅಂತಹ ಭ್ರಷ್ಟ ಅಧಿಕಾರಿಗಳ ಮೇಲೆ ಆಮ್ ಆದ್ಮಿ ಪಕ್ಷ ಕಣ್ಣಿಟ್ಟಿರುತ್ತದೆ ಎಂದು ಎಚ್ಚರಿಸಿದರು.




ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಕ್ಶದ ಹೊಸನಗರ ತಾಲೂಕ್ ಉಪಾಧ್ಯಕ್ಷ ಹಸನಬ್ಬಾ , ಮುಖಂಡರಾದ ಸಂತೋಷ್ ಆಶ್ರಿತಾ,ಚೇತನ್ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

3 hours ago

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

6 hours ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

6 hours ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

16 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

22 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

1 day ago