ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು.




ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು.

ಕುಕ್ಕರ್ ಹಿಡಿದಿರುವುದನ್ನು ಕೆಲ ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು. ಬಿಜೆಪಿ ಸ್ಥಳೀಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ತಿದೆ. ನನ್ಮ ಕಟ್ಟಡದ ಬಾಡಿಗೆ ವಿಚಾರದಲ್ಲಿ ಅಣ್ಣನ ಮಗನ ಹೆಸರಿನಲ್ಲಿ ಅಗ್ರಿಮೆಂಟ್ ಆಗಿದೆ. ಚುನಾವಣೆ ಇರುವುದರಿಂದ ಬಿಜೆಪಿ ಭಯ‌ಹುಟ್ಟಿಸಲು ನೋಡ್ತಾ ಇದೆ. ಆದರೆ ಇದು ಭಯ ಬಿಜೆಪಿಗೆ ಇರುತ್ತದೆ ನನಗೆ ಅಲ್ಲ. ನಂದಿತ ಪ್ರಕರಣದಲ್ಲಿ ಆಗಿರುವ ನಾಟಕವನ್ನ ಬಿಜೆಪಿ ಈಗ ಕುಕ್ಕರ್ ಹಿಡಿದು ಬಿಂಬಿಸಲು ಹೊರಟಿದೆ ಎಂದರು.




ಕೆಲವರು ಕಿಮ್ಮನೆ ಮನೆ ದಾಳಿ ಆಗಿದೆ ಅಂತೆ ಎಂದು ಸುದ್ದಿ ಮಾಡಿದ್ದಾರೆ. ಸಮಾಜ ಸರಿ ಪಡಿಸುವ ವರ್ಗ ಕೆಲ ಚಾನೆಲ್ ನಲ್ಲಿ ಶಾರೀಕ್ ಬ್ಲಾಸ್ಟ್ ಮಾಡಿರುವ ದೃಶ್ಯ ನನ್ನ ಭಾವಚಿತ್ರವನ್ನ ದೊಡ್ಡದಾಗಿ ಬಿಂಬಿಸಲಾಗಿದೆ. ಇದು ಯೋಚನೆ ಮಾಡುವ ಪರಿಸ್ಥಿತಿ. ನಾನು ಓಡಿಹೋಗಿಲ್ಲ. ತೀರ್ಥಹಳ್ಳಿ ಜನಕ್ಕೆ ನಾನು ಏನು ಎಂಬುದು ಗೊತ್ತಿದೆ ಎಂದರು.

10 ವರ್ಷ ಶಾಸಕನಾಗಿದ್ದೇನೆ. ಇದರಿಂದ ಹೆದರುವುದಿಲ್ಲ. ರಾಜಕೀಯಕ್ಕೆ ಬಂದಿದ್ದುಸಮಾಜ ಸೇವೆಗಾಗಿ. ಇದನ್ನ ಸವಾಲಾಗಿ ಸ್ವೀಕರಿಸುವುದಾದರೆ ಸವಾಲಾಗಿ ಸ್ವೀಕರಿಸುವೆ. ಆರಗ ಜ್ಞಾನೇಂದ್ರರವರಿಗೆ ಈ ಬಗ್ಗೆ ಸವಾಲು ಎಸೆಯುವೆ. ಅಮಿತ್ ಶಾ ಮತ್ತು ಜ್ಞಾನೇಂದ್ರ ಇಬ್ವರೂ ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರರವರ ಪುತ್ರನಿಗೆ  ಸೇರಿದ ಲೇಔಟ್ ಇದೆ. ಅದಕ್ಕೆ ಕಾಂಕ್ರಿಟ್ ರಸ್ತೆ ಆಗಿದೆ. ದಿಡೀರ್ ಅಂತ ಹೇಗೆ ರಸ್ತೆ ನಿರ್ಮಿಸಲಾಗುತ್ತದೆ. ಸ್ಯಾಂಟ್ರೋ ರವಿ ವಿಚಾರದಲ್ಲಿ ಫೆಬ್ರವರಿ ಒಳಗೆ ಆರಗ ರಾಜೀನಾಮೆ ನೀಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಯಾವ ಅಧಿಕಾರಿಯನ್ನ ಎಲ್ಲಿ ಹಾಕಬೇಕು ಎಂದು ಸ್ಯಾಂಟ್ರೋ ರವಿ ಬಳಿ ಪಟ್ಟಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗ ಅರೆಸ್ಟ್ ಮಾಡಬೇಕೆಂದರು.




ಪಿಎಸ್ಐ ಮತ್ತು ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಗೃಹಸಚಿವರೇ ಆರೋಪಿ ನಂಬರ್1 ಎಂದು ವಿವರಿಸಿದರು. ಅಡಿಕೆಯ ಟಾಸ್ಕ್ ಫೋರ್ಸ್ ಅಧ್ಯಕ್ಷರಾಗಿ ಪರ್ಯಾಯ ಬೆಳೆ ಬೆಳೆಯಲು ಅಧಿವೇಶನದಲ್ಲಿ ತಿಳಿಸಿದ್ದಾರೆ. ಈದೇಶದಲ್ಲಿ ಮೊದಲನೇ ಉಗ್ರ ಯಾರು ಎಂದರೆ ನಾಥುರಾಮ್ ಗೋಡ್ಸೆ. ಆತ ಕೊಂದಿರುವುದು ಸತ್ಯವನ್ನ‌, ಅಹಸೆಯನ್ನ, ಇವೆಲ್ಲದಕ್ಕೂ ಹೋರಾಟ ಮಾಡಲಾಗುವುದು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

7 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

14 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

16 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago