ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ
ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ ತೀರ್ಥಕ್ಷೇತ್ರ ಇದಾಗಿದ್ದು, ಪ್ರತಿನಿತ್ಯ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಹಸ್ರಾರು ಭಕ್ತರು ಈ ಕ್ಷೇತ್ರದ ದರ್ಶನ ಪಡೆದು ಹೋಗುತ್ತಾರೆ. ಇಲ್ಲಿ ತಂಗಿ ಹೋಗುವ ಪ್ರಯಾಣಿಕರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಶ್ರೀ ಮಠ ನಿರ್ವಹಿಸುತ್ತಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಸುಮಾರು 200ಕ್ಕೂ ಅಧಿಕ ಸುಸಜ್ಜಿತ ಕೊಠಡಿಗಳನ್ನು ರೋಗಿಗಳ ಆರೈಕೆಗೆ ಸರ್ಕಾರಕ್ಕೆ ನೀಡಿ, ಮಾನವೀಯತೆಗೆ ಶ್ರೀ ಮಠವು ಸಾಕ್ಷಿಯಾಗಿತ್ತು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಸಮಾಜಮುಖಿ ಕಾರ್ಯದಲ್ಲಿ ಮಠಮಾನ್ಯಗಳ ಪಾತ್ರ ಹಿರಿದು : ಆರಗ ಜ್ಞಾನೇಂದ್ರ
ರಿಪ್ಪನ್ ಪೇಟೆ :ಸರ್ಕಾರದ ಜೊತೆ ಜೊತೆಯಲ್ಲಿಯೇ ಸಮಾಜಮುಖಿ ಕಾರ್ಯದಲ್ಲಿ ಯಾವುದೇ ಪ್ರತಿ ಫಲಾಪೇಕ್ಷೆ ಇಲ್ಲದೆ ಮಠಮಾನ್ಯಗಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಹೊಂಬುಜ ಜೈನ ಮಠದಲ್ಲಿ ಜನವರಿ 23 ರಿಂದ 27ರವರೆಗೆ ಪಂಚಕಲ್ಯಾಣ ಪೂಜಾ ಮಹೋತ್ಸವದ ಅಂಗವಾಗಿ ಜೈನ ಸಮುದಾಯದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕೃತಕ ಕಾಲು ಜೋಡಣೆ ಗಾಗಿ ಭಾನುವಾರ ಆಯೋಜಿಸಿದ್ದ ಅಳತೆಯ ಉಚಿತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಠದ ಪೀಠಾಧಿಕಾರಿ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ
ವರ್ಯ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಸುಮಾರು 72 ಫಲಾನುಭವಿಗಳು ಆಯ್ಕೆಯಾದರು.
ಪಂಚ ಕಲ್ಯಾಣ ಕಾರ್ಯಕ್ರಮದಲ್ಲಿ ಜನ ಕಲ್ಯಾಣ ಯೋಜನೆಯನ್ನು ಶ್ರೀ ಮಠವು ಆಯೋಜಿಸಿದೆ. ಅಂದು ಆಯ್ಕೆಯಾದ ಫಲಾನುಭವಿಗಳಿಗೆ ಕೃತಕ ಕಾಲು ಅಳವಡಿಕೆ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್