ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.




ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ ದುರ್ಮರಣ ಹೊಂದಿದ್ದಾರೆ ಎಂದರೆ ನಂಬಲು ಅಸಾಧ್ಯವಾಯಿತು. ನೀವು ಯಾವ ರೀತಿ ಮನೆ ಮಗನನ್ನು ಕಳೆದುಕೊಂಡು ದುಃಖಿಸುತ್ತಿದ್ದಿರೊ ಅದೇ ಅನುಭಾವ ನಮಗೆ ಆಗಿದೆ ಎಂದರು.


ನಮ್ಮ ಜೊತೆಗೆ ಇಷ್ಟು ವರ್ಷ ಕೆಲಸ ಮಾಡಿದರೂ ಎಂದಿಗೂ ತಮ್ಮ ಕುಟುಂಬವದರ ಬಗ್ಗೆ ಹೇಳಿಲ್ಲ ಹಾಗೂ ಒಂದು ಕೆಲಸವನ್ನು ಮಾಡಿಸಿಕೊಂಡಿಲ್ಲ. ಈತ ಇಷ್ಟು ಜನ ಸಂಪಾದನೆ ಮಾಡಿದ್ದಾರೆ ಎಂದರೇ ನಂಬಲು ಅಸಾಧ್ಯವಾಗಿದೆ. ಇಂಥಹ ಯುವಕನಿಗೆ ಇಂಥಹ ಸಾವು ಸರಿಯಲ್ಲ. ಯಾರೇ ಆಗಲಿ ಬೆಂಕಿ, ನೀರು ಗಾಳಿಯೊಂದಿಗೆ ಹುಡುಗಾಟ ಮಾಡಲು ಹೋಗಬಾರದು ಇವುಗಳ ಮುಂದೇ ನಾವೆಲ್ಲರೂ ನಶ್ವರ. ನಿಮಗೆ ಸಾಂತ್ವನ ಹೇಳುವ ಸ್ಥಿತಿಯಲ್ಲಿ ನಾವಿಲ್ಲ. ನಿಮ್ಮ ದುಃಖ ಸಾಂತ್ವನದಿಂದ ಕಡಿಮೆಯಾಗದು. ಆದರೂ ಆ ದೇವರು ನಿಮಗೆ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಬಹುದು ಎಂದು ಹೇಳಿದರು.




ಸುಮಾರು 26ರ ವಯಸ್ಸಿನಲ್ಲಿಯೇ ಬಿಜೆಪಿ ಭಜರಂಗದಳ, ಆರ್.ಎಸ್.ಎಸ್ ಹಿಂದೂ ಪರ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು ಇಷ್ಟು ಜನರನ್ನು ಸಂಪಾದನೆ ಮಾಡಿರುವ ಪ್ರಸನ್ನ ಭಟ್‌ರವರ ಹೆಸರಿನಲ್ಲಿ ಹೊಸನಗರದಲ್ಲಿ ಯೂತ್ ಐಕಾನ್ ಸ್ಮರಣಿಕೆ ಬಿಡುಗಡೆ ಮಾಡುವ ಬಗ್ಗೆ ಚಿಂತಿಸುತ್ತಿದು ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪ್ರಸನ್ನ ಭಟ್ ಕುಟುಂಬದ ದೊಡ್ಡಪ್ಪ ಕೃಷ್ಣಮೂರ್ತಿ ಭಟ್, ಚಿಕ್ಕಪ್ಪ ವೇಣುಗೋಪಾಲ್ ಹಾಗೂ ಸಂಪೂರ್ಣ ಕುಟುಂಬ ವರ್ಗ, ಅಂಬೇಡ್ಕರ್ ನಿಗಮದ ನಿರ್ದೆಶಕ ಎನ್.ಆರ್. ದೇವಾನಂದ್, ಬಿಜೆಪಿ ಹಿರಿಯರಾದ ಉಮೇಶ್ ಕಂಚುಗಾರ್, ಎ.ವಿ.ಮಲ್ಲಿಕಾರ್ಜುನ, ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಕೃಷ್ಣವೇಣಿ, ಗಾಯಿತ್ರಿ ನಾಗರಾಜ್, ಶ್ರೀಪತಿರಾವ್, ಎನ್ ಶ್ರೀಧರ ಉಡುಪ, ಯುವರಾಜ್, ಮಂಡಾನಿ ಮೋಹನ್, ಸುರೇಶ್ ಸ್ವಾಮಿರಾವ್, ಪ್ರಹ್ಲಾದ, ಸುಧೀಂದ್ರ ಪಂಡಿತ್, ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರಸನ್ನ ಭಟ್‌ರವರ ಅಭಿಮಾನಿಗಳು, ಸ್ನೇಹಿತರು ಇನ್ನೂ ಮುಂತಾದವರು ಇದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

3 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

4 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

4 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago