ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.




ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ ದುರ್ಮರಣ ಹೊಂದಿದ್ದಾರೆ ಎಂದರೆ ನಂಬಲು ಅಸಾಧ್ಯವಾಯಿತು. ನೀವು ಯಾವ ರೀತಿ ಮನೆ ಮಗನನ್ನು ಕಳೆದುಕೊಂಡು ದುಃಖಿಸುತ್ತಿದ್ದಿರೊ ಅದೇ ಅನುಭಾವ ನಮಗೆ ಆಗಿದೆ ಎಂದರು.


ನಮ್ಮ ಜೊತೆಗೆ ಇಷ್ಟು ವರ್ಷ ಕೆಲಸ ಮಾಡಿದರೂ ಎಂದಿಗೂ ತಮ್ಮ ಕುಟುಂಬವದರ ಬಗ್ಗೆ ಹೇಳಿಲ್ಲ ಹಾಗೂ ಒಂದು ಕೆಲಸವನ್ನು ಮಾಡಿಸಿಕೊಂಡಿಲ್ಲ. ಈತ ಇಷ್ಟು ಜನ ಸಂಪಾದನೆ ಮಾಡಿದ್ದಾರೆ ಎಂದರೇ ನಂಬಲು ಅಸಾಧ್ಯವಾಗಿದೆ. ಇಂಥಹ ಯುವಕನಿಗೆ ಇಂಥಹ ಸಾವು ಸರಿಯಲ್ಲ. ಯಾರೇ ಆಗಲಿ ಬೆಂಕಿ, ನೀರು ಗಾಳಿಯೊಂದಿಗೆ ಹುಡುಗಾಟ ಮಾಡಲು ಹೋಗಬಾರದು ಇವುಗಳ ಮುಂದೇ ನಾವೆಲ್ಲರೂ ನಶ್ವರ. ನಿಮಗೆ ಸಾಂತ್ವನ ಹೇಳುವ ಸ್ಥಿತಿಯಲ್ಲಿ ನಾವಿಲ್ಲ. ನಿಮ್ಮ ದುಃಖ ಸಾಂತ್ವನದಿಂದ ಕಡಿಮೆಯಾಗದು. ಆದರೂ ಆ ದೇವರು ನಿಮಗೆ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಬಹುದು ಎಂದು ಹೇಳಿದರು.




ಸುಮಾರು 26ರ ವಯಸ್ಸಿನಲ್ಲಿಯೇ ಬಿಜೆಪಿ ಭಜರಂಗದಳ, ಆರ್.ಎಸ್.ಎಸ್ ಹಿಂದೂ ಪರ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು ಇಷ್ಟು ಜನರನ್ನು ಸಂಪಾದನೆ ಮಾಡಿರುವ ಪ್ರಸನ್ನ ಭಟ್‌ರವರ ಹೆಸರಿನಲ್ಲಿ ಹೊಸನಗರದಲ್ಲಿ ಯೂತ್ ಐಕಾನ್ ಸ್ಮರಣಿಕೆ ಬಿಡುಗಡೆ ಮಾಡುವ ಬಗ್ಗೆ ಚಿಂತಿಸುತ್ತಿದು ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪ್ರಸನ್ನ ಭಟ್ ಕುಟುಂಬದ ದೊಡ್ಡಪ್ಪ ಕೃಷ್ಣಮೂರ್ತಿ ಭಟ್, ಚಿಕ್ಕಪ್ಪ ವೇಣುಗೋಪಾಲ್ ಹಾಗೂ ಸಂಪೂರ್ಣ ಕುಟುಂಬ ವರ್ಗ, ಅಂಬೇಡ್ಕರ್ ನಿಗಮದ ನಿರ್ದೆಶಕ ಎನ್.ಆರ್. ದೇವಾನಂದ್, ಬಿಜೆಪಿ ಹಿರಿಯರಾದ ಉಮೇಶ್ ಕಂಚುಗಾರ್, ಎ.ವಿ.ಮಲ್ಲಿಕಾರ್ಜುನ, ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಕೃಷ್ಣವೇಣಿ, ಗಾಯಿತ್ರಿ ನಾಗರಾಜ್, ಶ್ರೀಪತಿರಾವ್, ಎನ್ ಶ್ರೀಧರ ಉಡುಪ, ಯುವರಾಜ್, ಮಂಡಾನಿ ಮೋಹನ್, ಸುರೇಶ್ ಸ್ವಾಮಿರಾವ್, ಪ್ರಹ್ಲಾದ, ಸುಧೀಂದ್ರ ಪಂಡಿತ್, ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರಸನ್ನ ಭಟ್‌ರವರ ಅಭಿಮಾನಿಗಳು, ಸ್ನೇಹಿತರು ಇನ್ನೂ ಮುಂತಾದವರು ಇದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

2 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

3 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

17 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

17 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

24 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago