Headlines

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

ಹೊಸನಗರದಲ್ಲಿ ಪ್ರಸನ್ನ ಭಟ್ ಪಾರ್ಥಿವ ಶರೀರದ ಮೆರವಣಿಗೆಗೆ ಸಕಲ ಸಿದ್ದತೆ|Prasanna bhat

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಭಾನುವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದ್ದು ಇದಕ್ಕೂ ಮೊದಲು ಅಂತಿಮ ದರ್ಶನಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ದಯಾನಂದ ಸಾಗರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆ ನಡೆದು ಈಗ ಶಿವಮೊಗ್ಗಕ್ಕೆ ಆ್ಯಂಬುಲೆನ್ಸ್ ಮೂಲಕ ಪ್ರಸನ್ನರ ಮೃತದೇಹ ಬರುತ್ತಿದ್ದು ಸುಮಾರು 4-15 ರಿಂದ…

Read More

ಹುಂಚಾ – ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ|sucide

ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.  ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಹೊಸವರ್ಷದ ಪಾರ್ಟಿಯಲ್ಲಿ ಗನ್ ಫೈರ್ – ಯುವಕನಿಗೆ ಗಾಯ : ಗುಂಡು ಹಾರಿಸಿದ ವ್ಯಕ್ತಿ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ವೇಳೆ ಗುಂಡು ತಗುಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದರು.  ಸರಿಯಾಗಿ 12 ಗಂಟೆಗೆ ಮಂಜುನಾಥ ಓಲೇಕರ್ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಂಜುನಾಥ ಓಲೇಕರ್ ಅವರು ಹಾರಿಸಿದ ಗುಂಡು ಮಿಸ್ ಫೈರ್ ಆಗಿದೆ. ಪಾರ್ಟಿ ಮಾಡುತ್ತಿದ್ದ ಯುವಕನಿಗೆ…

Read More