Headlines

ಚಿರತೆ ಉಗುರು ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿ ಬಂಧನ|leopard

ಅಕ್ರಮವಾಗಿ ಚಿರತೆಯ ಉಗುರು ಮಾರಾಟ ಮಾಡಲು ಯತ್ನಿಸುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಶಿವಮೊಗ್ಗದ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಬಳಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಚಿರತೆ ಉಗುರನ್ನು ಮಾರಾಟ ಮಾಡಲು ಯತ್ನಿಸುತಿದ್ದ ಸಿದ್ದಾಪುರ ನಿವಾಸಿ ಗಣಪತಿ ಬಿನ್ ಲಕ್ಷಣನಾಯ್ಕ್ ಎಂಬಾತನನ್ನು ಬಂಧಿಸಿ ಆರೋಪಿಯಿಂದ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಜ.30 ರಂದು ಶಿರಾಳಕೊಪ್ಪ ಬಂದ್ ಗೆ ಹಿಂದೂ ಜಾಗರಣ ವೇದಿಕೆ ಕರೆ – ಬಂದ್ ವಿರೋಧಿಸಿ ಠಾಣೆ ಮುಂದೆ ಧರಣಿ ನಡೆಸಲು ಮುಂದಾದ ಅಂಜುಮನ್ ಇಸ್ಲಾಂ ಕಮಿಟಿ|

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್‌ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ. ಪೊಲೀಸರ ದೌರ್ಜನ್ಯ ಮತ್ತು ಶಿರಾಳಕೊಪ್ಪದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಿದ್ದು ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ)  ಶಿರಾಳಕೊಪ್ಪ ಬಂದ್ ಗೆ ಕರೆಕೊಟ್ಟಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಬಂದ್ ನಿಮಿತ್ತ ಸ್ವಯಂ ಘೋಷಿತ…

Read More

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.  11111 ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…

Read More

ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…

Read More

ಇಂದಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯ ನಿರ್ವಹಿಸಬೇಕಾಗಿದೆ – ಹರತಾಳು ಹಾಲಪ್ಪ|sagara

ಸಾಗರ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗಾಂಧಿ ಮೈದಾನದಲ್ಲಿ ಮಲೆನಾಡು ರಹಸ್ಯ ವಾರಪತ್ರಿಕೆ ,ಸುದ್ದಿಮನೆ ಹಾಗೂ ಗ್ಲೋಬಲ್ ಡಿಜಿಟಲ್ ಮೀಡಿಯಾ ಆಯೋಜಿಸಿದ್ದ ವಾರ್ಷಿಕ ಸಂಭ್ರಮಾ‍ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳನ್ನು…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು – ಹಿರಿಯ ಪತ್ರಕರ್ತ ಪದ್ಮರಾಜ್ ದಂಡಾವತಿ|hombuja

ರಿಪ್ಪನ್‌ಪೇಟೆ : ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ನಿರ್ಧಾರಗಳನ್ನು ದಿಢೀರ್ ತೆಗೆದುಕೊಂಡು ತಮ್ಮ ಜೀವನವನ್ನು ಕೊನೆಗಾಣಿಸುತ್ತಿರುವ ಯುವ ಸಮೂಹಕ್ಕೆ ಶ್ರೇಷ್ಠ ಗ್ರಂಥಗಳ ಅಧ್ಯಯನದ ಬಗ್ಗೆ ಜಾಗೃತಿಗೊಳಿಸುವುದು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಐದನೇ ದಿನವಾಗ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾನವನ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಧಾರ್ಮಿಕ…

Read More