Headlines

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ಮುಖ್ಯ ಶಿಕ್ಷಕಿಯ ವರ್ಗಾವಣೆ – ಶಾಲೆಗೆ ಬೀಗ ಹಾಕಿ ಮಕ್ಕಳ ಪ್ರತಿಭಟನೆ ! school

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ. ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ. ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಆನಂದಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|crime

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಮೊದ್ಲೆಸರ ಗ್ರಾಮದ  ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ. ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶನಿವಾರ ವಿದ್ಯಾರ್ಥಿನಿಯರಿಬ್ಬರು…

Read More