ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು.

ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು.

ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ  ಹಾಗೂ ಸಚಿವರಾದ ಸುನಿಲ್ ಕುಮಾರ್. ರಾಜ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ  ಶಾಸಕರು ಮತ್ತು ಎಂ ಎಸ್ ಐ ಎಲ್  ಅಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ  ಆರ್ಯ ಈಡಿಗ  ಸಂಘದ ಅಧ್ಯಕ್ಷ ತಿಮ್ಮೇಗೌಡ ಹಾಗೂ ಇನ್ನಿತರರು  ಹಾಜರಿದ್ದರು.

Leave a Reply

Your email address will not be published. Required fields are marked *