ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ.
ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ 24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.
ಆನಂತರ ವಾಪಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ ಗೈರಾಗಿದ್ದಾರೆ. ಈ ಸಂಬಂಧ ಪೊಲೀಸ್ ಅಧೀಕ್ಷಕರು ಪರಾರಿ ಪತ್ರವನ್ನು ಹೊರಡಿಸಿದ್ದರು. ಆದರೆ ಈ ಪತ್ರವನ್ನು ಜಾರಿಮಾಡಿದ್ದರು, ಪೊಲೀಸ್ ಕಾನ್ಸ್ಟೇಬಲ್ ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ಇವರ ವಿರುದ್ಧ ಮನುಷ್ಯ ಕಾಣೆ ಪ್ರಕರಣ ದಾಖಲಿಸುವಂತೆ ಎಸ್ಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ. ಹೀಗಾಗಿ ಈ ಸಂಬಂಧ ಮಾಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.