ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ.
ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ 24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.
ಆನಂತರ ವಾಪಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ ಗೈರಾಗಿದ್ದಾರೆ. ಈ ಸಂಬಂಧ ಪೊಲೀಸ್ ಅಧೀಕ್ಷಕರು ಪರಾರಿ ಪತ್ರವನ್ನು ಹೊರಡಿಸಿದ್ದರು. ಆದರೆ ಈ ಪತ್ರವನ್ನು ಜಾರಿಮಾಡಿದ್ದರು, ಪೊಲೀಸ್ ಕಾನ್ಸ್ಟೇಬಲ್ ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ಇವರ ವಿರುದ್ಧ ಮನುಷ್ಯ ಕಾಣೆ ಪ್ರಕರಣ ದಾಖಲಿಸುವಂತೆ ಎಸ್ಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ. ಹೀಗಾಗಿ ಈ ಸಂಬಂಧ ಮಾಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…