ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ.
ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ 24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.
ಆನಂತರ ವಾಪಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ ಗೈರಾಗಿದ್ದಾರೆ. ಈ ಸಂಬಂಧ ಪೊಲೀಸ್ ಅಧೀಕ್ಷಕರು ಪರಾರಿ ಪತ್ರವನ್ನು ಹೊರಡಿಸಿದ್ದರು. ಆದರೆ ಈ ಪತ್ರವನ್ನು ಜಾರಿಮಾಡಿದ್ದರು, ಪೊಲೀಸ್ ಕಾನ್ಸ್ಟೇಬಲ್ ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ಇವರ ವಿರುದ್ಧ ಮನುಷ್ಯ ಕಾಣೆ ಪ್ರಕರಣ ದಾಖಲಿಸುವಂತೆ ಎಸ್ಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ. ಹೀಗಾಗಿ ಈ ಸಂಬಂಧ ಮಾಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…