ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ.
ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ ಕೆ ಎನ್ ಕರ್ನಾಟಕವನ್ನು ಪ್ರತಿನಿಧಿಸಿ ಟ್ರಿಪಲ್ ಜಂಪ್ ನಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ನಾಡಿಗೆ,ನಮ್ಮೂರಿಗೆ ಹೆಮ್ಮೆ ತಂದಿದ್ದಾರೆ.
ಭೂಮಿಕಾ ಕೆ ಎನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕಗಚಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಪಡೆದಿದ್ದಾರೆ.ನಂತರ ಕೊಡಗಿನ ಪ್ರೌಢಶಾಲೆಯಲ್ಲಿ ಅವಕಾಶ ಗಿಟ್ಟಿಸಿ ಈಗ ಕರ್ನಾಟಕವೇ ತಿರುಗಿನೋಡುವ ಸಾಧನೆಗೈದಿದ್ದಾರೆ.
ಮಲೆನಾಡಿನ ಮಳೆಕಾಡಿನ ನಡುವಿನ ಕಾಡಿನೂರಗಳಲ್ಲಿ ಹೆಣ್ಣು ಮಕ್ಕಳು ಕ್ರೀಡೆಯನ್ನು ತುಂಬ ಆಸಕ್ತಿಯಿಂದ ತೆಗೆದುಕೊಂಡು, ಅದರಲ್ಲೇ ಭವಿಷ್ಯ ಹುಡುಕುವುದು ಸಣ್ಣ ಸಾಧನೆಯಲ್ಲಾ, ಅಂತಹದರಲ್ಲಿ ಖೇಲೋ ಇಂಡಿಯಾದಂತಹ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಿಟ್ಟಿಸಿಕೊಂಡು ನಮ್ಮೂರಿನ ಯುವ ಪ್ರತಿಭೆ ರಾಷ್ಟ್ರ ಮಟ್ಟದಲ್ಲಿ ತನ್ನ ಛಾಪು ಮೆರೆಯುತಿರುವುದು ಹೆಮ್ಮೆಯ ಸಂಗತಿಯಾಗಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗೈದು ಒಲಿಂಪಿಕ್ಸ್ ನಲ್ಲಿ ಪಾಲ್ಗೊಂಡು ನಮ್ಮ ದೇಶಕ್ಕೆ ಕೀರ್ತಿ ತಂದುಕೊಡಲಿ ಎಂಬುವುದೇ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಆಶಯ……
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್