ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.





ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ

ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ ಗುರುತುಗಳನ್ನು ಭದ್ರಪಡಿಸಿಕೊಳ್ಳುವ ಕಾರ್ಯವನ್ನು ಆರಂಭಿಸಿದೆ. ಬೀರನಕೆರೆ ಭಾಗದಲ್ಲಿ ಗೋಮಾಳದ ಜಾಗವಿದ್ದು ಅದನ್ನು ಕೂಡಾ ಅರಣ್ಯ ಇಲಾಖೆ ತನ್ನದೆಂದು ಗುರುತು ಮಾಡಿಕೊಂಡಿದೆ. ಫೆಬ್ರವರಿ ೮ರಂದು ಮಧ್ಯಾಹ್ನದ ಹೊತ್ತಿಗೆ ತಂಡದೊಂದಿಗೆ ಬಂದ ಅಧಿಕಾರಿಗಳು ರೈತರ ಜಮೀನಿನ ಮೇಲೆಯೇ ಬಾಂದ್‌ ಕಲ್ಲುಗಳನ್ನು ಮರುಸ್ಥಾಪಿಸಿದರು.


ಸರ್ವೆ ನಂ.85ರಲ್ಲಿ ಮಂಜಪ್ಪ ಎಂಬವರಿಗೆ 1.12 ಎಕರೆ ಜಮೀನು ಇತ್ತು. ಈ ಜಾಗದಲ್ಲೂ ಬಾಂದ್‌ ಕಲ್ಲುಗಳನ್ನು ಅಳವಡಿಸಲಾಗಿದೆ. ಇದರಿಂದ ತನ್ನ ಜಮೀನು ಅರಣ್ಯ ಇಲಾಖೆ ಪಾಲಾಗಲಿದೆ ಎಂಬ‌ ಭಯಕ್ಕೆ ಮಂಜಪ್ಪ ಅವರಿಗೆ ಹೃದಯಾಘಾತವಾಗಿ ಅವರು ಮೃತಪಟ್ಟರು.

ಇದರಿಂದ ಆಕ್ರೋಶಿತರಾದ ಊರಿನ ಜನರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. ಮಧ್ಯಾಹ್ನದ ಹೊತ್ತು ಯಾರಿಗೂ ತಿಳಿಯದಂತೆ ಬಂದು ಅಳತೆ ಮಾಡಲಾಗಿದೆ. ಈಗ ಭೂಸ್ವಾಧೀನ ಹೊಂದಿರುವ ರೈತರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಆಕ್ಷೇಸಿ ಘೇರಾವ್‌ ಹಾಕಿದರು. ಅರಣ್ಯಾಧಿಕಾರಿಗಳು ತಮಗೆ ಭೂಮಿ ಮರುವಶ ಮಾಡಿಕೊಳ್ಳುವ ಉದ್ದೇಶವಿಲ್ಲ. ಅದರೆ, ಎಷ್ಟು ಜಾಗವಿದೆ ಎನ್ನುವುದನ್ನು ಲೆಕ್ಕಾಚಾರ ಮಾಡಬೇಕಾಗಿದೆ. ಅದಕ್ಕಾಗಿ ಸಮೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

19 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

22 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

23 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

23 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago