ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ ಗುರುತುಗಳನ್ನು ಭದ್ರಪಡಿಸಿಕೊಳ್ಳುವ ಕಾರ್ಯವನ್ನು ಆರಂಭಿಸಿದೆ. ಬೀರನಕೆರೆ ಭಾಗದಲ್ಲಿ ಗೋಮಾಳದ ಜಾಗವಿದ್ದು ಅದನ್ನು ಕೂಡಾ ಅರಣ್ಯ ಇಲಾಖೆ ತನ್ನದೆಂದು ಗುರುತು ಮಾಡಿಕೊಂಡಿದೆ. ಫೆಬ್ರವರಿ ೮ರಂದು ಮಧ್ಯಾಹ್ನದ ಹೊತ್ತಿಗೆ ತಂಡದೊಂದಿಗೆ ಬಂದ ಅಧಿಕಾರಿಗಳು ರೈತರ ಜಮೀನಿನ ಮೇಲೆಯೇ ಬಾಂದ್ ಕಲ್ಲುಗಳನ್ನು ಮರುಸ್ಥಾಪಿಸಿದರು.
ಸರ್ವೆ ನಂ.85ರಲ್ಲಿ ಮಂಜಪ್ಪ ಎಂಬವರಿಗೆ 1.12 ಎಕರೆ ಜಮೀನು ಇತ್ತು. ಈ ಜಾಗದಲ್ಲೂ ಬಾಂದ್ ಕಲ್ಲುಗಳನ್ನು ಅಳವಡಿಸಲಾಗಿದೆ. ಇದರಿಂದ ತನ್ನ ಜಮೀನು ಅರಣ್ಯ ಇಲಾಖೆ ಪಾಲಾಗಲಿದೆ ಎಂಬ ಭಯಕ್ಕೆ ಮಂಜಪ್ಪ ಅವರಿಗೆ ಹೃದಯಾಘಾತವಾಗಿ ಅವರು ಮೃತಪಟ್ಟರು.
ಇದರಿಂದ ಆಕ್ರೋಶಿತರಾದ ಊರಿನ ಜನರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. ಮಧ್ಯಾಹ್ನದ ಹೊತ್ತು ಯಾರಿಗೂ ತಿಳಿಯದಂತೆ ಬಂದು ಅಳತೆ ಮಾಡಲಾಗಿದೆ. ಈಗ ಭೂಸ್ವಾಧೀನ ಹೊಂದಿರುವ ರೈತರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಆಕ್ಷೇಸಿ ಘೇರಾವ್ ಹಾಕಿದರು. ಅರಣ್ಯಾಧಿಕಾರಿಗಳು ತಮಗೆ ಭೂಮಿ ಮರುವಶ ಮಾಡಿಕೊಳ್ಳುವ ಉದ್ದೇಶವಿಲ್ಲ. ಅದರೆ, ಎಷ್ಟು ಜಾಗವಿದೆ ಎನ್ನುವುದನ್ನು ಲೆಕ್ಕಾಚಾರ ಮಾಡಬೇಕಾಗಿದೆ. ಅದಕ್ಕಾಗಿ ಸಮೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…