ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಕಂಚಿ ಬಾಗಿಲಿನಲ್ಲಿ ವ್ಯಕ್ತಿಯೊಬ್ಬ ದನದ ಮಾಂಸವನ್ನು ಮಾರಾಟ ಮಾಡಲು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗ ದಳದ ಯುವಕರು ಆತನಿಗೆ ಅಡ್ಡಗಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಭದ್ರಾವತಿಯ ಅನ್ವರ್ ಕಾಲೋನಿಯ ಮೂಮಿನ್ ಮೊಹಲ್ಲಾ ವಾಸಿ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ (30) ದನದ ಮಾಂಸದ ವ್ಯಾಪಾರ ಮಾಡುವ ಯುವಕ. ಈತ ಶುಕ್ರವಾರ ಬೆಳಗ್ಗೆ 10 ರಿಂದ 12 ಕೆಜಿಯಷ್ಟು ದನದ ಮಾಂಸದ ಪ್ಯಾಕೆಟ್ಗಳನ್ನು ಮಾಡಿಕೊಂಡು ಮನೆ ಮನೆಗೆ ಕೊಡಲು ತನ್ನ ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಬಜರಂಗಳದ ಕಾರ್ಯಕರ್ತರು ತಡೆದಿದ್ದಾರೆ.
ಸುರಗಿತೋಪು ನಿವಾಸಿ ಕಿರಣ, ಕಡದಕಟ್ಟೆಯ ಮಂಜುನಾಥ ಮತ್ತು ಬೂತನಗುಡಿಯ ಆಕಾಶ ಎಂಬ ಮೂವರು ಅಬ್ದುಲ್ ರೆಹಮಾನ್ ನನ್ನು ಹಿಡಿಯಲು ಹೋದಾಗ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಕಿರಣ ಮತ್ತು ಇತರರು ಆತನಿಗೆ ಧರ್ಮದೇಟು ನೀಡಿದ್ದು, ಅಷ್ಟರಲ್ಲೇ ಸ್ಥಳಕ್ಕೆ ಬಂದ ಎಎಸ್ಐ ಜಗದೀಶ್ ಅವರಿಗೆ ಒಪ್ಪಿಸಿದ್ದಾರೆ.
ಹಲ್ಲೆಗೊಳಗಾದ ಅಬ್ದುಲ್ ರೆಹಮಾನ್ನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ತೆರಳಿದ್ದಾನೆ. ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಭದ್ರಾವತಿ ಕಾಂಗ್ರೆಸ್ ಶಾಸಕರ ಮಗ ಗಣೇಶ್ ಭೇಟಿ ನೀಡಿದ್ದರು. ಬಜರಂಗದ ಕಾರ್ಯಕರ್ತನನ್ನು ತಕ್ಷಣ ಬಂಧಿಸಬೇಕೆಂದು ಎಎಸ್ಪಿ ಜಿತೇಂದ್ರ ಕುಮಾರ್ ದಯಾಮರಿಗೆ ಒತ್ತಾಯಿಸಿದ್ದಾರೆ.
ಖಾಜಿ ಮೊಹಲ್ಲಾದ ಮನ್ಸೂರ್ ಎಂಬವರ ನೇತೃತ್ವದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಯುವಕರು ಹಲ್ಲೆ ಮಾಡಿದವರನ್ನು ದಸ್ತಗಿರಿ ಮಾಡದೆ ಇದ್ದಲ್ಲಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಮಾಜ್ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…