ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard


ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ.



ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು ಗುರುತಿಸಿದ್ದು ಅರಣ್ಯ ಇಲಾಖೆ, ಮೊರಾರ್ಜಿ ವಸತಿ ಶಾಲೆಗೆ ಆಡಳಿತಕ್ಕೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ಕ್ರಮವಹಿಸಲಾಗಿದೆ.


ಆನಂದಗಿರಿ ಗುಡ್ಡದ ಭಾಗದಲ್ಲಿ ತಿಂಗಳಿನಿಂದ ಚಿರತೆ ಓಡಾಟ ನಡೆಸುತ್ತಿದ್ದು ಜೀವಾಪಾಯ ಉಂಟು ಮಾಡಬಹುದು ಎಂಬ ಆತಂಕ ಎದುರಾಗಿದೆ. ಆನಂದಗಿರಿ ಗುಡ್ಡದ ಪರಿಸರದಲ್ಲಿ ಮೊರಾರ್ಜಿ ವಸತಿ ಶಾಲೆ, ಐಟಿಐ ಕಾಲೇಜು, ತುಂಗಾ ಮಹಾವಿದ್ಯಾಲಯ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಜನವಸತಿ ಪ್ರದೇಶ ಇದೆ. ದಿಢೀರನೆ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ಕಳವಳ ಉಂಟು ಮಾಡಿದೆ.



ಒಂದೂವರೆ ತಿಂಗಳ ಹಿಂದೆ ತೀರ್ಥಹಳ್ಳಿ ಪಟ್ಟಣ, ಕುರುವಳ್ಳಿ, ತುಂಗಾನದಿ ಪರಿಸರದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡ ಬೆನ್ನಲ್ಲೆ ಚಿರತೆ ಪ್ರತ್ಯಕ್ಷವಾಗಿದೆ. ವನ್ಯಜೀವಿಗಳು ನಿಧಾನಕ್ಕೆ ಪಟ್ಟಣ ಪ್ರವೇಶ ಮಾಡುತ್ತಿದ್ದು ಭೀತಿ ಮೂಡುವಂತಾಗಿದೆ. ಆಹಾರ ಅರಸಿ ವನ್ಯಜೀವಿಗಳು ಪಟ್ಟಣಕ್ಕೆ ಪ್ರವೇಶ ಮಾಡುತ್ತಿವೆ ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಗುರುತಿಸಿದರೂ ಬೇರೆ ಕಾರಣಗಳ ಪತ್ತೆಗೆ ಸಂಬಂಧಪಟ್ಟ ಇಲಾಖೆಗಳು ಇನ್ನು ಮುಂದಾಗಿಲ್ಲ

ಪರಿಸರ ಸಂರಕ್ಷಣೆ ನಿಯಮ ಕಠಿಣಗೊಳ್ಳುತ್ತಿರುವ ಸಂದರ್ಭ ಜನವಸತಿ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸುತ್ತಿವೆ. ಮಾನವ, ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಾಗದಂತೆ ಎಚ್ಚರವಹಿಸಬೇಕಾದ ಅನಿವಾರ್ಯತೆ ಇದೀಗ ಎದುರಾಗಿದೆ. ಪಟ್ಟಣದ ಸುತ್ತಲಿನ ಪರಿಸರದ ಸಂರಕ್ಷಣೆ ನಿಯಮಗಳ ಅನ್ವಯ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಸುತ್ತಲಿನ ಅರಣ್ಯ ಪರಿಸರದ ಪ್ರದೇಶವನ್ನು ಬಫರ್ ಜೋನ್ ವಲಯವನ್ನಾಗಿ ಗುರುತಿಸಲು ಆಡಳಿತದಲ್ಲಿ ಬಿರುಸಿನ ಸಿದ್ಧತೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿದೆ.

ಚಿರತೆ ಓಡಾಟದ ಕುರಿತಂತೆ ಜನರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಿಂಗಳಿನಿಂದ ಮಕ್ಕಳ ಸುರಕ್ಷತೆಗಾಗಿ ಎಚ್ಚರಿಕೆ ವಹಿಸಲಾಗಿದೆ. ಚಿರತೆ ಓಡಾಟದ ಕುರಿತಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಅರಣ್ಯ ಇಲಾಖೆ ಶಾಲೆ ಸುತ್ತಲಿನ ಪರಿಸರವನ್ನು ಗಮನಿಸುತ್ತಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಸುಚಿತ್ರಾ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago